12:55 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಚಳ್ಳಕೆರೆ: 15 ದಿನಗಳಲ್ಲಿ 100ಕ್ಕೂ ಹೆಚ್ಚು ಮನೆ ಕುಸಿತ; 5 ಮಂದಿ ಸಾವು; ಹಳೆ ಗೋಡೆಗಳ ಸರ್ವೇ ಆರಂಭ

21/11/2021, 10:49

ಗೋಪನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಕಳೆದ ಸುಮಾರು 15 ದಿನದಿಂದ ಸತತ ಮಳೆಯಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಗೋಡೆ ಕುಸಿದು ಐದು ಜನರು ಪ್ರಾಣ ಕಳೆದುಕೊಂಡಿರುವುದರಿಂದ    ಅಧಿಕಾರಿಗಳು ಎಚ್ಚೆತ್ತುಕೊಂಡು ಶಿಥಿಲವಾದ ಮನೆಗಳ ಸರ್ವೇ ಕಾರ್ಯವನ್ನು ಜಿಟಿ ಜಿಟಿ ಮಳೆಯಲ್ಲೂ ಕೊಡೆ ಹಿಡಿದು ಆರಂಭಿಸಿದ್ದಾರೆ. 

ಚಳ್ಳಕೆರೆ ತಾಲೂಕಿನ ಬಾಲೆನಹಳ್ಳಿ, ರಾಮಜೋಗಿಹಳ್ಳಿ, ಚಿಕ್ಕಮ್ಮನಹಳ್ಳಿ, ದೊಡ್ಡೇರಿ ಕೆರೆ ಮುದ್ದಿನ ಹಟ್ಟಿ, ಕೋಡಿಹಳ್ಳಿ, ಹಿರೇಹಳ್ಳಿ , ಪಾಲನಾಯಕನ ಕೋಟೆ, ಕಕ್ಕಿ ಬೋರನ ಹಟ್ಟಿ ಹಳ್ಳಿಗಳು ಸೇರಿದಂತೆ ವಿವಿಧ ಗ್ರಾಮಗಳಿಗೆ ತಹಶೀಲ್ದಾರ್ ಎನ್.ರಘುಮೂರ್ತಿ,ತಾಪಂ ಇಒ ಮಡಗಿನ ಬಸಪ್ಪ ಹಾಗೂ ಸಿಬ್ಬಂದಿಗಳು ಪರಿಶೀಲನೆ ಆರಂಭಿಸಿದ್ದಾರೆ.


ಗೋಡೆ ಕುಸಿದು ಐದು ಜನರು ಮೃತ ಪಟ್ಟ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಹಳೆಯ ಶಿಥಿಲವಾದ ಗೋಡೆ ಬಿರುಕು ಬಿಟ್ಟಿರುವ ಮನೆಗಳ ಸರ್ವೆ ಮಾಡಿ ಅಂತಹ ಕುಟುಂಬಗಳಿಗೆ ತಾತ್ಕಾಲಿಕವಾಗಿ ಶಾಲೆ ಹಾಗೂ ಸಮುದಾಯಭವನಗಳಲ್ಲಿ ತಾತ್ಕಾಲಿಕವಾಗಿ ಗಂಜಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ತಾಪಂ ಇಒ ಮಡಗಿನ ಬಸಪ್ಪ ತಿಳಿಸಿದ್ದಾರೆ.

ಗ್ರಾಪಂ, ನಗರಸಭೆ ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅಧಿಕಾರಿಗಳು ಜಿಟಿ ಜಿಟಿ ಯಲ್ಲೂ ಬೆಳ್ಳೆಂ ಬೆಳ್ಳಗ್ಗೆ ಕೊಡೆಗಳನ್ನಿಡಿದು ಸರ್ವೆ ಕಾರ್ಯಕ್ಕೆ ಚುರುಕುಮಟ್ಟಿಸಿದ್ದಾರೆ.


ತಹಶೀಲ್ದಾರ್ ಎನ್.ರಘುಮೂರ್ತಿ ಮಾತನಾಡಿ ತಾಲೂಕಿನಲ್ಲಿ ಅಕಾಲಿಕ ಮೆಳೆ ಪ್ರಾರಂಭವಾಗಿ 15 ದಿನಗಳನ್ನು ಸುಮಾರು 100 ಕ್ಕೂಹೆಚ್ಚು ಮನೆಗಳು ಕುಸಿದಿದ್ದು ಪ್ರತಿ ಗ್ರಾಮಗಳಲ್ಲಿ ಹಳೆಯ ಶಿಥಿಲವಾದ ಮನೆಗಳಲ್ಲಿ ವಾಸಿಸುವ ಕುಟುಂಬಗಳು ಸುಮುದಾಯ ಭವನ, ಶಾಲೆಗಳಲ್ಲಿ ವಾಸ ಮಾಡುವಂತೆ ತಿಳಿಸಿದ್ದು ಸರಕಾರದಿಂದ ವಸತಿಯೋಜನೆಯಡಿಯಲ್ಲಿ ಬಿದ್ದ ಹಾಗೂ ಶಿಥಿಲವಾದ ಮನೆಗಳಿಗೆ ವಸತಿ ಯೋಜನೆಯ ಮನೆಗಳ ಮಂಜೂರಾತಿ ಮಾಡುವಂತೆ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು