9:01 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಚಳ್ಳಕೆರೆ: 15 ದಿನಗಳಲ್ಲಿ 100ಕ್ಕೂ ಹೆಚ್ಚು ಮನೆ ಕುಸಿತ; 5 ಮಂದಿ ಸಾವು; ಹಳೆ ಗೋಡೆಗಳ ಸರ್ವೇ ಆರಂಭ

21/11/2021, 10:49

ಗೋಪನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಕಳೆದ ಸುಮಾರು 15 ದಿನದಿಂದ ಸತತ ಮಳೆಯಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಗೋಡೆ ಕುಸಿದು ಐದು ಜನರು ಪ್ರಾಣ ಕಳೆದುಕೊಂಡಿರುವುದರಿಂದ    ಅಧಿಕಾರಿಗಳು ಎಚ್ಚೆತ್ತುಕೊಂಡು ಶಿಥಿಲವಾದ ಮನೆಗಳ ಸರ್ವೇ ಕಾರ್ಯವನ್ನು ಜಿಟಿ ಜಿಟಿ ಮಳೆಯಲ್ಲೂ ಕೊಡೆ ಹಿಡಿದು ಆರಂಭಿಸಿದ್ದಾರೆ. 

ಚಳ್ಳಕೆರೆ ತಾಲೂಕಿನ ಬಾಲೆನಹಳ್ಳಿ, ರಾಮಜೋಗಿಹಳ್ಳಿ, ಚಿಕ್ಕಮ್ಮನಹಳ್ಳಿ, ದೊಡ್ಡೇರಿ ಕೆರೆ ಮುದ್ದಿನ ಹಟ್ಟಿ, ಕೋಡಿಹಳ್ಳಿ, ಹಿರೇಹಳ್ಳಿ , ಪಾಲನಾಯಕನ ಕೋಟೆ, ಕಕ್ಕಿ ಬೋರನ ಹಟ್ಟಿ ಹಳ್ಳಿಗಳು ಸೇರಿದಂತೆ ವಿವಿಧ ಗ್ರಾಮಗಳಿಗೆ ತಹಶೀಲ್ದಾರ್ ಎನ್.ರಘುಮೂರ್ತಿ,ತಾಪಂ ಇಒ ಮಡಗಿನ ಬಸಪ್ಪ ಹಾಗೂ ಸಿಬ್ಬಂದಿಗಳು ಪರಿಶೀಲನೆ ಆರಂಭಿಸಿದ್ದಾರೆ.


ಗೋಡೆ ಕುಸಿದು ಐದು ಜನರು ಮೃತ ಪಟ್ಟ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಹಳೆಯ ಶಿಥಿಲವಾದ ಗೋಡೆ ಬಿರುಕು ಬಿಟ್ಟಿರುವ ಮನೆಗಳ ಸರ್ವೆ ಮಾಡಿ ಅಂತಹ ಕುಟುಂಬಗಳಿಗೆ ತಾತ್ಕಾಲಿಕವಾಗಿ ಶಾಲೆ ಹಾಗೂ ಸಮುದಾಯಭವನಗಳಲ್ಲಿ ತಾತ್ಕಾಲಿಕವಾಗಿ ಗಂಜಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ತಾಪಂ ಇಒ ಮಡಗಿನ ಬಸಪ್ಪ ತಿಳಿಸಿದ್ದಾರೆ.

ಗ್ರಾಪಂ, ನಗರಸಭೆ ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅಧಿಕಾರಿಗಳು ಜಿಟಿ ಜಿಟಿ ಯಲ್ಲೂ ಬೆಳ್ಳೆಂ ಬೆಳ್ಳಗ್ಗೆ ಕೊಡೆಗಳನ್ನಿಡಿದು ಸರ್ವೆ ಕಾರ್ಯಕ್ಕೆ ಚುರುಕುಮಟ್ಟಿಸಿದ್ದಾರೆ.


ತಹಶೀಲ್ದಾರ್ ಎನ್.ರಘುಮೂರ್ತಿ ಮಾತನಾಡಿ ತಾಲೂಕಿನಲ್ಲಿ ಅಕಾಲಿಕ ಮೆಳೆ ಪ್ರಾರಂಭವಾಗಿ 15 ದಿನಗಳನ್ನು ಸುಮಾರು 100 ಕ್ಕೂಹೆಚ್ಚು ಮನೆಗಳು ಕುಸಿದಿದ್ದು ಪ್ರತಿ ಗ್ರಾಮಗಳಲ್ಲಿ ಹಳೆಯ ಶಿಥಿಲವಾದ ಮನೆಗಳಲ್ಲಿ ವಾಸಿಸುವ ಕುಟುಂಬಗಳು ಸುಮುದಾಯ ಭವನ, ಶಾಲೆಗಳಲ್ಲಿ ವಾಸ ಮಾಡುವಂತೆ ತಿಳಿಸಿದ್ದು ಸರಕಾರದಿಂದ ವಸತಿಯೋಜನೆಯಡಿಯಲ್ಲಿ ಬಿದ್ದ ಹಾಗೂ ಶಿಥಿಲವಾದ ಮನೆಗಳಿಗೆ ವಸತಿ ಯೋಜನೆಯ ಮನೆಗಳ ಮಂಜೂರಾತಿ ಮಾಡುವಂತೆ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು