10:29 AM Wednesday23 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಚಳ್ಳಕೆರೆ ಗಂಜಿಗುಂಟೆ ಲಂಬಾಣಿ ತಾಂಡದಲ್ಲಿ ಹೆಚ್ಚುತ್ತಿದೆ ಬೀದಿ ನಾಯಿಗಳ ಕಾಟ: ಶ್ವಾನ ಕಡಿತಕ್ಕೆ ಯುವಕ ಬಲಿ

04/12/2021, 09:55

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಬೀದಿ ನಾಯಿಯ ದಾಳಿಗೆ ತುತ್ತಾಗಿ ಯುವಕನೊರ್ವ ಮೃತಪಟ್ಟ ಪ್ರಕರಣ ಬೆಳಕಿಗೆ ಬಂದಿದೆ.

ಚಳ್ಳಕೆರೆ ತಾಲೂಕಿನ ಸೋಮಗುದ್ದು ಗ್ರಾಪಂ ವ್ಯಾಪ್ತಿಯ ಗಂಜಿಗುಂಟೆ ಲಂಬಾಣಿ ತಾಂಡದಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಹೈರಾಣಾಗಿದ್ದಾರೆ. 

ಸುಮಾರು 15 ದಿನಗಳ ಹಿಂದೆ ಮೃತ್ತುರಾಜ್ ಎಂಬ 30ರ ವರ್ಷದ ಯುವಕನಿಗೆ ಬಿದಿ ನಾಯಿ ಕಚ್ಚಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ಗುಣ ಮುಖರಾಗದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ  ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು. ಅಲ್ಲೂ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗಿನ ಜಾವ ಯುವಕ ಮುತ್ತುರಾಜು ಇಹಲೋಕ ತ್ಯಜಿಸಿದ್ದಾನೆ. ಸುದ್ದಿ ತಿಳಿದ ಕುಟುಂಬಸ್ಥರು  ರೋಧನ ಮುಗಿಲು ಮುಟ್ಟುವಂತಿದ್ದು, ಕೂಡಲೆ ಬೀದಿ ನಾಯಿಗಳಿಗೆ ಕಡಿವಾಣ ಹಾಕುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಗಂಜಿಗುಂಟೆ ಲಂಬಾಣಿ ಲಾಂಡದಲ್ಲಿ ಒಂದೇ ಸಮುದಾಯದವರಿದ್ದು, ಸುಮಾರು 200ಕ್ಕೂ ಹೆಚ್ಚು ಮನೆಗದ್ದು ಅಕ್ರಮವಾಗಿ ಸುಮಾರು 10

ಅಂಗಡಿಗಳಲ್ಲಿ ಚಿಕನ್ ಮಾಂಸ ಮಾರಾಟ, ಚಿಕನ್ ಕಬಾಬ್ ದಿನಕ್ಕೆ ಕ್ವಿಂಟಲ್ ಗಂಟಲೆ ಮಾರಾಟವಾಗುತ್ತಿದ್ದು, ಚಿಕನ್ ತ್ಯಾಜ್ಯಕ್ಕಾಗಿ ನಾಯಿಗಳು ರಸ್ತೆಯಲ್ಲೇ ಮಲಗುತ್ತಿವೆ. ವೃದ್ದರು, ಮಕ್ಕಳು, ಸೇರಿದಂತೆ ಸಾರ್ವಜನಿಕರು ಪ್ಲಾಸ್ಟಿಕ್ ಕವರುಗಳನ್ನು ಕೈಯಲ್ಲಿಡಿದಕೊಂಡು ಹೋದರೆ ಸಾಕು ಮೇಲೆರಿಗುತ್ತವೆ. ಈ ಬಗ್ಗೆ ಸಾಕಾಷ್ಟು ಬಾರಿ ಗ್ರಾಪಂ ಅಧಿಕಾರಿಗಳ ಗಮನಸೆಳೆದರೂ ಪ್ರಯೋಜವಾಗಿಲ್ಲ. ಈಗಲಾದರೂ ಸಂಬಂಧ ಪಟ್ಟ ಅಧಿಕಾರಿಗಳು ಅಕ್ರಮ ಕೋಳಿ ಮಾಂಸ ಅಂಗಡಿ ಹಾಗೂ ಬೀದಿ ನಾಯಿಗಳಿಗೆ ಕಡಿವಾಣ ಹಾಕುವರೇ ಕಾದು ನೋಡ ಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು