2:56 AM Friday19 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಚಳ್ಳಕೆರೆ ಗಂಜಿಗುಂಟೆ ಲಂಬಾಣಿ ತಾಂಡದಲ್ಲಿ ಹೆಚ್ಚುತ್ತಿದೆ ಬೀದಿ ನಾಯಿಗಳ ಕಾಟ: ಶ್ವಾನ ಕಡಿತಕ್ಕೆ ಯುವಕ ಬಲಿ

04/12/2021, 09:55

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಬೀದಿ ನಾಯಿಯ ದಾಳಿಗೆ ತುತ್ತಾಗಿ ಯುವಕನೊರ್ವ ಮೃತಪಟ್ಟ ಪ್ರಕರಣ ಬೆಳಕಿಗೆ ಬಂದಿದೆ.

ಚಳ್ಳಕೆರೆ ತಾಲೂಕಿನ ಸೋಮಗುದ್ದು ಗ್ರಾಪಂ ವ್ಯಾಪ್ತಿಯ ಗಂಜಿಗುಂಟೆ ಲಂಬಾಣಿ ತಾಂಡದಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಹೈರಾಣಾಗಿದ್ದಾರೆ. 

ಸುಮಾರು 15 ದಿನಗಳ ಹಿಂದೆ ಮೃತ್ತುರಾಜ್ ಎಂಬ 30ರ ವರ್ಷದ ಯುವಕನಿಗೆ ಬಿದಿ ನಾಯಿ ಕಚ್ಚಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ಗುಣ ಮುಖರಾಗದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ  ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು. ಅಲ್ಲೂ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗಿನ ಜಾವ ಯುವಕ ಮುತ್ತುರಾಜು ಇಹಲೋಕ ತ್ಯಜಿಸಿದ್ದಾನೆ. ಸುದ್ದಿ ತಿಳಿದ ಕುಟುಂಬಸ್ಥರು  ರೋಧನ ಮುಗಿಲು ಮುಟ್ಟುವಂತಿದ್ದು, ಕೂಡಲೆ ಬೀದಿ ನಾಯಿಗಳಿಗೆ ಕಡಿವಾಣ ಹಾಕುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಗಂಜಿಗುಂಟೆ ಲಂಬಾಣಿ ಲಾಂಡದಲ್ಲಿ ಒಂದೇ ಸಮುದಾಯದವರಿದ್ದು, ಸುಮಾರು 200ಕ್ಕೂ ಹೆಚ್ಚು ಮನೆಗದ್ದು ಅಕ್ರಮವಾಗಿ ಸುಮಾರು 10

ಅಂಗಡಿಗಳಲ್ಲಿ ಚಿಕನ್ ಮಾಂಸ ಮಾರಾಟ, ಚಿಕನ್ ಕಬಾಬ್ ದಿನಕ್ಕೆ ಕ್ವಿಂಟಲ್ ಗಂಟಲೆ ಮಾರಾಟವಾಗುತ್ತಿದ್ದು, ಚಿಕನ್ ತ್ಯಾಜ್ಯಕ್ಕಾಗಿ ನಾಯಿಗಳು ರಸ್ತೆಯಲ್ಲೇ ಮಲಗುತ್ತಿವೆ. ವೃದ್ದರು, ಮಕ್ಕಳು, ಸೇರಿದಂತೆ ಸಾರ್ವಜನಿಕರು ಪ್ಲಾಸ್ಟಿಕ್ ಕವರುಗಳನ್ನು ಕೈಯಲ್ಲಿಡಿದಕೊಂಡು ಹೋದರೆ ಸಾಕು ಮೇಲೆರಿಗುತ್ತವೆ. ಈ ಬಗ್ಗೆ ಸಾಕಾಷ್ಟು ಬಾರಿ ಗ್ರಾಪಂ ಅಧಿಕಾರಿಗಳ ಗಮನಸೆಳೆದರೂ ಪ್ರಯೋಜವಾಗಿಲ್ಲ. ಈಗಲಾದರೂ ಸಂಬಂಧ ಪಟ್ಟ ಅಧಿಕಾರಿಗಳು ಅಕ್ರಮ ಕೋಳಿ ಮಾಂಸ ಅಂಗಡಿ ಹಾಗೂ ಬೀದಿ ನಾಯಿಗಳಿಗೆ ಕಡಿವಾಣ ಹಾಕುವರೇ ಕಾದು ನೋಡ ಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು