7:26 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಚಳ್ಳಕೆರೆ ಗಂಜಿಗುಂಟೆ ಲಂಬಾಣಿ ತಾಂಡದಲ್ಲಿ ಹೆಚ್ಚುತ್ತಿದೆ ಬೀದಿ ನಾಯಿಗಳ ಕಾಟ: ಶ್ವಾನ ಕಡಿತಕ್ಕೆ ಯುವಕ ಬಲಿ

04/12/2021, 09:55

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಬೀದಿ ನಾಯಿಯ ದಾಳಿಗೆ ತುತ್ತಾಗಿ ಯುವಕನೊರ್ವ ಮೃತಪಟ್ಟ ಪ್ರಕರಣ ಬೆಳಕಿಗೆ ಬಂದಿದೆ.

ಚಳ್ಳಕೆರೆ ತಾಲೂಕಿನ ಸೋಮಗುದ್ದು ಗ್ರಾಪಂ ವ್ಯಾಪ್ತಿಯ ಗಂಜಿಗುಂಟೆ ಲಂಬಾಣಿ ತಾಂಡದಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಹೈರಾಣಾಗಿದ್ದಾರೆ. 

ಸುಮಾರು 15 ದಿನಗಳ ಹಿಂದೆ ಮೃತ್ತುರಾಜ್ ಎಂಬ 30ರ ವರ್ಷದ ಯುವಕನಿಗೆ ಬಿದಿ ನಾಯಿ ಕಚ್ಚಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ಗುಣ ಮುಖರಾಗದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ  ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು. ಅಲ್ಲೂ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗಿನ ಜಾವ ಯುವಕ ಮುತ್ತುರಾಜು ಇಹಲೋಕ ತ್ಯಜಿಸಿದ್ದಾನೆ. ಸುದ್ದಿ ತಿಳಿದ ಕುಟುಂಬಸ್ಥರು  ರೋಧನ ಮುಗಿಲು ಮುಟ್ಟುವಂತಿದ್ದು, ಕೂಡಲೆ ಬೀದಿ ನಾಯಿಗಳಿಗೆ ಕಡಿವಾಣ ಹಾಕುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಗಂಜಿಗುಂಟೆ ಲಂಬಾಣಿ ಲಾಂಡದಲ್ಲಿ ಒಂದೇ ಸಮುದಾಯದವರಿದ್ದು, ಸುಮಾರು 200ಕ್ಕೂ ಹೆಚ್ಚು ಮನೆಗದ್ದು ಅಕ್ರಮವಾಗಿ ಸುಮಾರು 10

ಅಂಗಡಿಗಳಲ್ಲಿ ಚಿಕನ್ ಮಾಂಸ ಮಾರಾಟ, ಚಿಕನ್ ಕಬಾಬ್ ದಿನಕ್ಕೆ ಕ್ವಿಂಟಲ್ ಗಂಟಲೆ ಮಾರಾಟವಾಗುತ್ತಿದ್ದು, ಚಿಕನ್ ತ್ಯಾಜ್ಯಕ್ಕಾಗಿ ನಾಯಿಗಳು ರಸ್ತೆಯಲ್ಲೇ ಮಲಗುತ್ತಿವೆ. ವೃದ್ದರು, ಮಕ್ಕಳು, ಸೇರಿದಂತೆ ಸಾರ್ವಜನಿಕರು ಪ್ಲಾಸ್ಟಿಕ್ ಕವರುಗಳನ್ನು ಕೈಯಲ್ಲಿಡಿದಕೊಂಡು ಹೋದರೆ ಸಾಕು ಮೇಲೆರಿಗುತ್ತವೆ. ಈ ಬಗ್ಗೆ ಸಾಕಾಷ್ಟು ಬಾರಿ ಗ್ರಾಪಂ ಅಧಿಕಾರಿಗಳ ಗಮನಸೆಳೆದರೂ ಪ್ರಯೋಜವಾಗಿಲ್ಲ. ಈಗಲಾದರೂ ಸಂಬಂಧ ಪಟ್ಟ ಅಧಿಕಾರಿಗಳು ಅಕ್ರಮ ಕೋಳಿ ಮಾಂಸ ಅಂಗಡಿ ಹಾಗೂ ಬೀದಿ ನಾಯಿಗಳಿಗೆ ಕಡಿವಾಣ ಹಾಕುವರೇ ಕಾದು ನೋಡ ಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು