6:30 PM Thursday23 - April 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ…

ಇತ್ತೀಚಿನ ಸುದ್ದಿ

ಚಳ್ಳಕೆರೆ ಗಂಜಿಗುಂಟೆ ಲಂಬಾಣಿ ತಾಂಡದಲ್ಲಿ ಹೆಚ್ಚುತ್ತಿದೆ ಬೀದಿ ನಾಯಿಗಳ ಕಾಟ: ಶ್ವಾನ ಕಡಿತಕ್ಕೆ ಯುವಕ ಬಲಿ

04/12/2021, 09:55

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಬೀದಿ ನಾಯಿಯ ದಾಳಿಗೆ ತುತ್ತಾಗಿ ಯುವಕನೊರ್ವ ಮೃತಪಟ್ಟ ಪ್ರಕರಣ ಬೆಳಕಿಗೆ ಬಂದಿದೆ.

ಚಳ್ಳಕೆರೆ ತಾಲೂಕಿನ ಸೋಮಗುದ್ದು ಗ್ರಾಪಂ ವ್ಯಾಪ್ತಿಯ ಗಂಜಿಗುಂಟೆ ಲಂಬಾಣಿ ತಾಂಡದಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಹೈರಾಣಾಗಿದ್ದಾರೆ. 

ಸುಮಾರು 15 ದಿನಗಳ ಹಿಂದೆ ಮೃತ್ತುರಾಜ್ ಎಂಬ 30ರ ವರ್ಷದ ಯುವಕನಿಗೆ ಬಿದಿ ನಾಯಿ ಕಚ್ಚಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ಗುಣ ಮುಖರಾಗದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ  ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು. ಅಲ್ಲೂ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗಿನ ಜಾವ ಯುವಕ ಮುತ್ತುರಾಜು ಇಹಲೋಕ ತ್ಯಜಿಸಿದ್ದಾನೆ. ಸುದ್ದಿ ತಿಳಿದ ಕುಟುಂಬಸ್ಥರು  ರೋಧನ ಮುಗಿಲು ಮುಟ್ಟುವಂತಿದ್ದು, ಕೂಡಲೆ ಬೀದಿ ನಾಯಿಗಳಿಗೆ ಕಡಿವಾಣ ಹಾಕುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಗಂಜಿಗುಂಟೆ ಲಂಬಾಣಿ ಲಾಂಡದಲ್ಲಿ ಒಂದೇ ಸಮುದಾಯದವರಿದ್ದು, ಸುಮಾರು 200ಕ್ಕೂ ಹೆಚ್ಚು ಮನೆಗದ್ದು ಅಕ್ರಮವಾಗಿ ಸುಮಾರು 10

ಅಂಗಡಿಗಳಲ್ಲಿ ಚಿಕನ್ ಮಾಂಸ ಮಾರಾಟ, ಚಿಕನ್ ಕಬಾಬ್ ದಿನಕ್ಕೆ ಕ್ವಿಂಟಲ್ ಗಂಟಲೆ ಮಾರಾಟವಾಗುತ್ತಿದ್ದು, ಚಿಕನ್ ತ್ಯಾಜ್ಯಕ್ಕಾಗಿ ನಾಯಿಗಳು ರಸ್ತೆಯಲ್ಲೇ ಮಲಗುತ್ತಿವೆ. ವೃದ್ದರು, ಮಕ್ಕಳು, ಸೇರಿದಂತೆ ಸಾರ್ವಜನಿಕರು ಪ್ಲಾಸ್ಟಿಕ್ ಕವರುಗಳನ್ನು ಕೈಯಲ್ಲಿಡಿದಕೊಂಡು ಹೋದರೆ ಸಾಕು ಮೇಲೆರಿಗುತ್ತವೆ. ಈ ಬಗ್ಗೆ ಸಾಕಾಷ್ಟು ಬಾರಿ ಗ್ರಾಪಂ ಅಧಿಕಾರಿಗಳ ಗಮನಸೆಳೆದರೂ ಪ್ರಯೋಜವಾಗಿಲ್ಲ. ಈಗಲಾದರೂ ಸಂಬಂಧ ಪಟ್ಟ ಅಧಿಕಾರಿಗಳು ಅಕ್ರಮ ಕೋಳಿ ಮಾಂಸ ಅಂಗಡಿ ಹಾಗೂ ಬೀದಿ ನಾಯಿಗಳಿಗೆ ಕಡಿವಾಣ ಹಾಕುವರೇ ಕಾದು ನೋಡ ಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು