12:28 PM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಹಸು ಕಳ್ಳತನ ಮಾಡಿಕೊಂಡು ಹೋಗುತ್ತಿದ್ದ ವಾಹನವನ್ನು ಬೆನ್ನಟ್ಟಿ ಜಾನುವಾರು ರಕ್ಷಿಸಿಕೊಂಡ ರೈತ ನಾಗರಾಜು

18/12/2023, 12:25

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲೂಕಿನ ಹೊಟ್ಟಪ್ಪನಹಳ್ಳಿಯ ನಂದಾಪುರ ನಗರದ ರೈತ ನಾಗರಾಜ್ ಅವರ ಹಸುವನ್ನು ಯಾರೂ ಕಳ್ಳರು ಅಶೋಕ್ ಲೇಲ್ಯಾಂಡ್ ವಾಹನದಲ್ಲಿ ಕದ್ದು ಪರಾರಿಯಾಗಲು ಯತ್ನಿಸಿದು, ನಾಗರಾಜ್ ಅವರ ಕುಟುಂಬದ ಸಮಯಪ್ರಜ್ಞೆಯಿಂದ ಹಸುವನ್ನು ಕದ್ದು ಪರಾರಿಯಾಗುತ್ತಿದ್ದ ವಾಹನವನ್ನು ಹಿಂಬಾಲಿಸಿ ತಮ್ಮ ಹಸುವನ್ನು ರಕ್ಷಿಸಿ ಕೊಂಡಿದ್ದಾರೆ.
ಹಸುವನ್ನು ಕದ್ದು ಪರಾರಿಯಾಗುತ್ತಿದ್ದ ವಾಹನದ ಶಬ್ದವನ್ನು ಕೇಳಿದ ರೈತ ನಾಗರಾಜ್ ಮತ್ತು ಮಗ ಮಂಜುನಾಥ್ ಅಳಿಯ ಲೋಕೇಶ್ ಗಾಬರಿಯಿಂದ ಎಚ್ಚರಗೊಂಡು. ಲೋಕೇಶ್ ಅವರ ಗೆಳೆಯರ 2 ಕಾರಿನಲ್ಲಿ ಹಸುವನ್ನು ಕದ್ದು ಪರಾರಿ ಆಗುತ್ತಿದ್ದ, KA51-AA-6295 ವಾಹನವನ್ನು 15 ಕಿಲೋಮೀಟರ್ ಚೇಂಜ್ ಮಾಡಿದು, ಗೋಪನಹಳ್ಳಿಯ ಬಿಎಸ್ಎನ್ಎಲ್ ಆಫೀಸಿನ ಹತ್ತಿರ ಕಳ್ಳರು ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ. ಈ ಘಟನೆಯು ಶನಿವಾರ ತಡರಾತ್ರಿ ನಡೆದಿದೆ.


ಮಧ್ಯರಾತ್ರಿ 12:50 ರಲ್ಲಿ ವಾಹನದಲ್ಲಿ ಕಳ್ಳರನ್ನು ಹಿಡಿಯಲು ಕಿರುಚಿಕೊಂಡು ಬಂದ ಕಾರಿನವರ ಶಬ್ದ ಕೇಳಿ ಬಂದಂತ ಕೆಆರ್‌ಎಸ್ ಪಕ್ಷದ ಮಣಿಕಂಠ, ರೈತರು ಜೀವನಕ್ಕೆ ಹಸುಗಳನ್ನು ಸಾಕುತ್ತಿದ್ದಾರೆ. ಆದರೆ ಸರ್ಕಾರದ ಸಬ್ಸಿಡಿಯ ಮೂಲಕ ವಾಹನವನ್ನು ಪಡೆದು ದುರ್ಬಳಕೆ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೇ ಸಾರಿಗೆ ಸಚಿವರೇ, ಇಂತಹ ಅಹಿತಕರ ಘಟನೆಗಳು ನಡೆಯದಂಗೆ ಸೂಕ್ತ ಕ್ರಮ ಕೈಗೊಳ್ಳಿ ರೈತರನ್ನು ರಕ್ಷಿಸಿ ಎಂದು ಹೇಳಿ.112 ಪೊಲೀಸರಿಗೆ ಮಾಹಿತಿ ನೀಡಿ ಹಸುವನ್ನು ಕದ್ದು ತಂದ ವಾಹನವನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು