9:08 AM Tuesday13 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಹಸು ಕಳ್ಳತನ ಮಾಡಿಕೊಂಡು ಹೋಗುತ್ತಿದ್ದ ವಾಹನವನ್ನು ಬೆನ್ನಟ್ಟಿ ಜಾನುವಾರು ರಕ್ಷಿಸಿಕೊಂಡ ರೈತ ನಾಗರಾಜು

18/12/2023, 12:25

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲೂಕಿನ ಹೊಟ್ಟಪ್ಪನಹಳ್ಳಿಯ ನಂದಾಪುರ ನಗರದ ರೈತ ನಾಗರಾಜ್ ಅವರ ಹಸುವನ್ನು ಯಾರೂ ಕಳ್ಳರು ಅಶೋಕ್ ಲೇಲ್ಯಾಂಡ್ ವಾಹನದಲ್ಲಿ ಕದ್ದು ಪರಾರಿಯಾಗಲು ಯತ್ನಿಸಿದು, ನಾಗರಾಜ್ ಅವರ ಕುಟುಂಬದ ಸಮಯಪ್ರಜ್ಞೆಯಿಂದ ಹಸುವನ್ನು ಕದ್ದು ಪರಾರಿಯಾಗುತ್ತಿದ್ದ ವಾಹನವನ್ನು ಹಿಂಬಾಲಿಸಿ ತಮ್ಮ ಹಸುವನ್ನು ರಕ್ಷಿಸಿ ಕೊಂಡಿದ್ದಾರೆ.
ಹಸುವನ್ನು ಕದ್ದು ಪರಾರಿಯಾಗುತ್ತಿದ್ದ ವಾಹನದ ಶಬ್ದವನ್ನು ಕೇಳಿದ ರೈತ ನಾಗರಾಜ್ ಮತ್ತು ಮಗ ಮಂಜುನಾಥ್ ಅಳಿಯ ಲೋಕೇಶ್ ಗಾಬರಿಯಿಂದ ಎಚ್ಚರಗೊಂಡು. ಲೋಕೇಶ್ ಅವರ ಗೆಳೆಯರ 2 ಕಾರಿನಲ್ಲಿ ಹಸುವನ್ನು ಕದ್ದು ಪರಾರಿ ಆಗುತ್ತಿದ್ದ, KA51-AA-6295 ವಾಹನವನ್ನು 15 ಕಿಲೋಮೀಟರ್ ಚೇಂಜ್ ಮಾಡಿದು, ಗೋಪನಹಳ್ಳಿಯ ಬಿಎಸ್ಎನ್ಎಲ್ ಆಫೀಸಿನ ಹತ್ತಿರ ಕಳ್ಳರು ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ. ಈ ಘಟನೆಯು ಶನಿವಾರ ತಡರಾತ್ರಿ ನಡೆದಿದೆ.


ಮಧ್ಯರಾತ್ರಿ 12:50 ರಲ್ಲಿ ವಾಹನದಲ್ಲಿ ಕಳ್ಳರನ್ನು ಹಿಡಿಯಲು ಕಿರುಚಿಕೊಂಡು ಬಂದ ಕಾರಿನವರ ಶಬ್ದ ಕೇಳಿ ಬಂದಂತ ಕೆಆರ್‌ಎಸ್ ಪಕ್ಷದ ಮಣಿಕಂಠ, ರೈತರು ಜೀವನಕ್ಕೆ ಹಸುಗಳನ್ನು ಸಾಕುತ್ತಿದ್ದಾರೆ. ಆದರೆ ಸರ್ಕಾರದ ಸಬ್ಸಿಡಿಯ ಮೂಲಕ ವಾಹನವನ್ನು ಪಡೆದು ದುರ್ಬಳಕೆ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೇ ಸಾರಿಗೆ ಸಚಿವರೇ, ಇಂತಹ ಅಹಿತಕರ ಘಟನೆಗಳು ನಡೆಯದಂಗೆ ಸೂಕ್ತ ಕ್ರಮ ಕೈಗೊಳ್ಳಿ ರೈತರನ್ನು ರಕ್ಷಿಸಿ ಎಂದು ಹೇಳಿ.112 ಪೊಲೀಸರಿಗೆ ಮಾಹಿತಿ ನೀಡಿ ಹಸುವನ್ನು ಕದ್ದು ತಂದ ವಾಹನವನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು