5:04 PM Sunday23 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

ಇತ್ತೀಚಿನ ಸುದ್ದಿ

ಚಳ್ಳಕೆರೆ: ಹಸು ಕಳ್ಳತನ ಮಾಡಿಕೊಂಡು ಹೋಗುತ್ತಿದ್ದ ವಾಹನವನ್ನು ಬೆನ್ನಟ್ಟಿ ಜಾನುವಾರು ರಕ್ಷಿಸಿಕೊಂಡ ರೈತ ನಾಗರಾಜು

18/12/2023, 12:25

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲೂಕಿನ ಹೊಟ್ಟಪ್ಪನಹಳ್ಳಿಯ ನಂದಾಪುರ ನಗರದ ರೈತ ನಾಗರಾಜ್ ಅವರ ಹಸುವನ್ನು ಯಾರೂ ಕಳ್ಳರು ಅಶೋಕ್ ಲೇಲ್ಯಾಂಡ್ ವಾಹನದಲ್ಲಿ ಕದ್ದು ಪರಾರಿಯಾಗಲು ಯತ್ನಿಸಿದು, ನಾಗರಾಜ್ ಅವರ ಕುಟುಂಬದ ಸಮಯಪ್ರಜ್ಞೆಯಿಂದ ಹಸುವನ್ನು ಕದ್ದು ಪರಾರಿಯಾಗುತ್ತಿದ್ದ ವಾಹನವನ್ನು ಹಿಂಬಾಲಿಸಿ ತಮ್ಮ ಹಸುವನ್ನು ರಕ್ಷಿಸಿ ಕೊಂಡಿದ್ದಾರೆ.
ಹಸುವನ್ನು ಕದ್ದು ಪರಾರಿಯಾಗುತ್ತಿದ್ದ ವಾಹನದ ಶಬ್ದವನ್ನು ಕೇಳಿದ ರೈತ ನಾಗರಾಜ್ ಮತ್ತು ಮಗ ಮಂಜುನಾಥ್ ಅಳಿಯ ಲೋಕೇಶ್ ಗಾಬರಿಯಿಂದ ಎಚ್ಚರಗೊಂಡು. ಲೋಕೇಶ್ ಅವರ ಗೆಳೆಯರ 2 ಕಾರಿನಲ್ಲಿ ಹಸುವನ್ನು ಕದ್ದು ಪರಾರಿ ಆಗುತ್ತಿದ್ದ, KA51-AA-6295 ವಾಹನವನ್ನು 15 ಕಿಲೋಮೀಟರ್ ಚೇಂಜ್ ಮಾಡಿದು, ಗೋಪನಹಳ್ಳಿಯ ಬಿಎಸ್ಎನ್ಎಲ್ ಆಫೀಸಿನ ಹತ್ತಿರ ಕಳ್ಳರು ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ. ಈ ಘಟನೆಯು ಶನಿವಾರ ತಡರಾತ್ರಿ ನಡೆದಿದೆ.


ಮಧ್ಯರಾತ್ರಿ 12:50 ರಲ್ಲಿ ವಾಹನದಲ್ಲಿ ಕಳ್ಳರನ್ನು ಹಿಡಿಯಲು ಕಿರುಚಿಕೊಂಡು ಬಂದ ಕಾರಿನವರ ಶಬ್ದ ಕೇಳಿ ಬಂದಂತ ಕೆಆರ್‌ಎಸ್ ಪಕ್ಷದ ಮಣಿಕಂಠ, ರೈತರು ಜೀವನಕ್ಕೆ ಹಸುಗಳನ್ನು ಸಾಕುತ್ತಿದ್ದಾರೆ. ಆದರೆ ಸರ್ಕಾರದ ಸಬ್ಸಿಡಿಯ ಮೂಲಕ ವಾಹನವನ್ನು ಪಡೆದು ದುರ್ಬಳಕೆ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೇ ಸಾರಿಗೆ ಸಚಿವರೇ, ಇಂತಹ ಅಹಿತಕರ ಘಟನೆಗಳು ನಡೆಯದಂಗೆ ಸೂಕ್ತ ಕ್ರಮ ಕೈಗೊಳ್ಳಿ ರೈತರನ್ನು ರಕ್ಷಿಸಿ ಎಂದು ಹೇಳಿ.112 ಪೊಲೀಸರಿಗೆ ಮಾಹಿತಿ ನೀಡಿ ಹಸುವನ್ನು ಕದ್ದು ತಂದ ವಾಹನವನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು