3:12 PM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಚಳ್ಳಕೆರೆ: ಹಸು ಕಳ್ಳತನ ಮಾಡಿಕೊಂಡು ಹೋಗುತ್ತಿದ್ದ ವಾಹನವನ್ನು ಬೆನ್ನಟ್ಟಿ ಜಾನುವಾರು ರಕ್ಷಿಸಿಕೊಂಡ ರೈತ ನಾಗರಾಜು

18/12/2023, 12:25

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲೂಕಿನ ಹೊಟ್ಟಪ್ಪನಹಳ್ಳಿಯ ನಂದಾಪುರ ನಗರದ ರೈತ ನಾಗರಾಜ್ ಅವರ ಹಸುವನ್ನು ಯಾರೂ ಕಳ್ಳರು ಅಶೋಕ್ ಲೇಲ್ಯಾಂಡ್ ವಾಹನದಲ್ಲಿ ಕದ್ದು ಪರಾರಿಯಾಗಲು ಯತ್ನಿಸಿದು, ನಾಗರಾಜ್ ಅವರ ಕುಟುಂಬದ ಸಮಯಪ್ರಜ್ಞೆಯಿಂದ ಹಸುವನ್ನು ಕದ್ದು ಪರಾರಿಯಾಗುತ್ತಿದ್ದ ವಾಹನವನ್ನು ಹಿಂಬಾಲಿಸಿ ತಮ್ಮ ಹಸುವನ್ನು ರಕ್ಷಿಸಿ ಕೊಂಡಿದ್ದಾರೆ.
ಹಸುವನ್ನು ಕದ್ದು ಪರಾರಿಯಾಗುತ್ತಿದ್ದ ವಾಹನದ ಶಬ್ದವನ್ನು ಕೇಳಿದ ರೈತ ನಾಗರಾಜ್ ಮತ್ತು ಮಗ ಮಂಜುನಾಥ್ ಅಳಿಯ ಲೋಕೇಶ್ ಗಾಬರಿಯಿಂದ ಎಚ್ಚರಗೊಂಡು. ಲೋಕೇಶ್ ಅವರ ಗೆಳೆಯರ 2 ಕಾರಿನಲ್ಲಿ ಹಸುವನ್ನು ಕದ್ದು ಪರಾರಿ ಆಗುತ್ತಿದ್ದ, KA51-AA-6295 ವಾಹನವನ್ನು 15 ಕಿಲೋಮೀಟರ್ ಚೇಂಜ್ ಮಾಡಿದು, ಗೋಪನಹಳ್ಳಿಯ ಬಿಎಸ್ಎನ್ಎಲ್ ಆಫೀಸಿನ ಹತ್ತಿರ ಕಳ್ಳರು ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ. ಈ ಘಟನೆಯು ಶನಿವಾರ ತಡರಾತ್ರಿ ನಡೆದಿದೆ.


ಮಧ್ಯರಾತ್ರಿ 12:50 ರಲ್ಲಿ ವಾಹನದಲ್ಲಿ ಕಳ್ಳರನ್ನು ಹಿಡಿಯಲು ಕಿರುಚಿಕೊಂಡು ಬಂದ ಕಾರಿನವರ ಶಬ್ದ ಕೇಳಿ ಬಂದಂತ ಕೆಆರ್‌ಎಸ್ ಪಕ್ಷದ ಮಣಿಕಂಠ, ರೈತರು ಜೀವನಕ್ಕೆ ಹಸುಗಳನ್ನು ಸಾಕುತ್ತಿದ್ದಾರೆ. ಆದರೆ ಸರ್ಕಾರದ ಸಬ್ಸಿಡಿಯ ಮೂಲಕ ವಾಹನವನ್ನು ಪಡೆದು ದುರ್ಬಳಕೆ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೇ ಸಾರಿಗೆ ಸಚಿವರೇ, ಇಂತಹ ಅಹಿತಕರ ಘಟನೆಗಳು ನಡೆಯದಂಗೆ ಸೂಕ್ತ ಕ್ರಮ ಕೈಗೊಳ್ಳಿ ರೈತರನ್ನು ರಕ್ಷಿಸಿ ಎಂದು ಹೇಳಿ.112 ಪೊಲೀಸರಿಗೆ ಮಾಹಿತಿ ನೀಡಿ ಹಸುವನ್ನು ಕದ್ದು ತಂದ ವಾಹನವನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು