5:45 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಚಳ್ಳಕೆರೆ ತಾಪಂ ಇಒ ಮೇಲೆ ಬಿಜೆಪಿ ಕಾರ್ಯಕರ್ತರ ಹಲ್ಲೆ: ಕಾಂಗ್ರೆಸ್ ನಿಂದ ಭಾರೀ ಪ್ರತಿಭಟನೆ, ಮಾನವ ಸರಪಳಿ

17/02/2022, 11:21

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹ ಅಧಿಕಾರಿ ಮಡುಗಿನ ಬಸಪ್ಪ ಅವರ ಮೇಲೆ ಬಿಜೆಪಿ ಕಾರ್ಯಕರ್ತರು ನಡೆಸಿದ ಹಲ್ಲೆಯನ್ನು ಖಂಡಿಸಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ವಾಲ್ಮೀಕಿ ವೃತ್ತದಿಂದ ಪ್ರತಿಭಟನ ಆರಂಭಿಸಿ ನೆಹರು ಸರ್ಕಲ್ ಬಳಿ ಮಾನವ ಸರಪಳಿ ನಿರ್ಮಿಸಿ ಇಓ ಮೇಲೆ ಹಲ್ಲೆ ನಡೆಸಿರುವ ಬಿಜೆಪಿ ಕಾರ್ಯಕರ್ತರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಘೊಷಣೆಗಳನ್ನು ಕೂಗಿ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚೌಳೂರು ಪ್ರಕಾಶ ಮಾತನಾಡಿ ಸರ್ಕಾರಿ ಅಧಿಕಾರಿಯು ಕರ್ತವ್ಯ ನಿರ್ವಹಿಸುವಾಗ ಹಲ್ಲೆ ನಡೆಸಿದ್ದಾರೆ, ಇದು ಬಿಜೆಪಿ ಕಾರ್ಯಕರ್ತರ ಗುಂಡಾಗಿರಿ, ಒಬ್ಬ ಅಧಿಕಾರಿ ಮೇಲೆ ಹಲ್ಲೆ ನಡೆಸಿದರೆ, ಜನಸಾಮಾನ್ಯರ ಗತಿಯೇನು, ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಸರ್ಕಾರ ಇದೆ ಎಂದು ಬಿಜೆಪಿ ಕಾರ್ಯಕರ್ತರು ಗುಂಡಾಗಿರಿ ಮಾಡುತ್ತಿದ್ದಾರೆ. ಇಂತಹ ಗುಂಡಾಗಳನ್ನು ಬಂಧಿಸಿ, ಕಾನೂನು ಕ್ರಮ ಜರುಗಿಸುವಂತೆ ಆಕ್ರೋಶ ವ್ಯಕ್ತ ಪಡಿಸಿದರು.

ನಂತರ ತಾಲ್ಲೂಕು ಕಚೇರಿ ಬಳಿ ತಹಶೀಲ್ದಾರ್ ಎನ್. ರಘುಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ತಿಪ್ಪೇಸ್ವಾಮಿ, ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿರಣ್ ಶಂಕರ್, ಜಿಪಂ ಮಾಜಿ ಸದಸ್ಯ ಪ್ರಕಾಶ ಮೂರ್ತಿ, ನಗರಸಭೆ ಅಧ್ಯಕ್ಷೆ ಸುಮಕ್ಕ, ಸದಸ್ಯರಾದ ರಮೇಶ್ ಗೌಡ, ವೈ. ಪ್ರಕಾಶ್, ರಾಘವೇಂದ್ರ, ಮಲ್ಲಿಕಾರ್ಜುನ, ವೀರಭದ್ರಪ್ಪ, ಮುಖಂಡರಾದ ರವಿಕುಮಾರ್, ಡಿ.ಕೆ. ಕಾಟಯ್ಯ, ಸಿ.ಟಿ. ಶ್ರೀನಿವಾಸ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು