7:00 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಕಾಂಗ್ರೆಸ್ ಪಕ್ಷದ  ಡಿಜಿಟಲ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ 

13/02/2022, 18:25

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಮುಂದಿನ ವಿಧಾಸಭೆ ಚುನಾವಣೆಯಲ್ಲಿ ನನ್ನನ್ನು ಸೋಲಿಸಬೇಕೆಂದು ಆಡಳಿತ ಪಕ್ಷದವರು ಅಭಿವೃದ್ಧಿ ಕಾಮಗಾರಿಗೆ ಅನುದಾನ ತಡೆದಿದ್ದು, ಕಾನೂನಾತ್ಮಕ ಹೋರಾಟದಿಂದ ಕ್ಷೇತ್ರಕ್ಕೆ ಅನುದಾನ ತಂದು ಅಭಿವೃದ್ಧಿ ಮಾಡಿರುವ ತೃಪ್ತಿ ನನಗಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.


ನಗರದ ಶಾಸಕರ ನಿವಾಸದ ಬಳಿ ಪರಶುರಾಂಪುರ ಹಾಗೂ ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.


ಇತ್ತೀಚಿನ ದಿನಗಳಲ್ಲಿ ಪೇಪರ್ ನೋಡುವುದಾಗಲಿ ಬರೆಯುವ ಅಭ್ಯಾಸ ಕಣ್ಮರೆಯಾಗುತ್ತಿರುವ ಕಾರಣ ಕಾಂಗ್ರೆಸ್ ಪಕ್ಷ ಇದೇ ಪ್ರಥಮ ಬಾರಿಗೆ ಡಿಜಿಟಲ್ ತಂತ್ರಜ್ಞಾನದೊಂದಿಗೆ ಪಕ್ಷದ ಸದಸ್ಯತ್ವ ನೋಂದಣೆ ಮಾಡಲಾಗುತ್ತಿದೆ. ಪಕ್ಷದ ಯಾವುದೇ ಚಿನ್ನೆಯಲ್ಲಿ ಚುನಾಣೆಗೆ ಸ್ಪರ್ಧಿಸಬೇಕಾದರೆ ಸದಸ್ಯತ್ವ ಕಡ್ಡಾಯವಾಗಿರುತ್ತದೆ. ಆದ್ದರಿಂದ ೧೮ ವರ್ಷ ತುಂಬಿದ ಮತದಾರರ ಗುರುತಿನ ಚೀಟಿ ಹೊಂದಿದ ಪ್ರತಿಯೊಬ್ಬರು ಸದಸ್ಯತ್ವ ಪಡೆಯ ಬೇಕು. ನಗರ ಹಾಗೂ ಗ್ರಾಮೀಣ ಭಾಗದ ಬೂತ್ ಮಟ್ಟದಲ್ಲಿ ಹೆಚ್ಚು ಹೆಚ್ಚು ಸದಸ್ಯತ್ವ ನೋಂದಣೆ ಮಾಡುವ ಮೂಲಕ ತಳ ಮಟ್ಟದಿಂದಲ್ಲೆ ಪಕ್ಷ ಸಂಘಟನೆಗೆ ಮುಂದಾಗ ಬೇಕು.

ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕಾರವಧಿಯಲ್ಲಿ ಕ್ಷೇತ್ರಕ್ಕೆ ಹಾಗೂ ರಾಜ್ಯಕ್ಕೆ ಸಾಕಷ್ಟು ಹಿಂದುಳಿದ ವರ್ಗಗಳಿಗೆ ಯೋಜನೆಗಳನ್ನು ಜಾರಿ ಮಾಡಿ ಹೆಚ್ಚು ಅನುದಾನ ಬಿಡುಗಡೆ ಮಾಡಿರುತ್ತಾರೆ. ಕ್ಷೇತ್ರದ ಎಷ್ಟೇ ಅಭಿವೃದ್ಧಿಯಾದರೂ ಕಾರ್ಯಕರ್ತರಿಗೆ ಏನು ಮಾಡಿಲ್ಲ ಎಂಬ ಅಸಮಧಾನವಿದೆ. ಕೆಲವರು ಪಕ್ಷದಲ್ಲಿದ್ದುಕೊಂಡೆ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಾರ್ಚ್ ೩೧ ರ ಒಳಗೆ ಸುಮಾರು ೫೦ ಲಕ್ಷಕ್ಕೂ ಹೆಚ್ಚು ಡಿಜಿಟಲ್ ಸದಸ್ಯತ್ವ ನೋಂದಣೆ ಮಾಡಬೇಕೆಂಬ ಗುರಿಯಿದೆ.

ಜನರನ್ನು ದಿಕ್ಕು ತಪ್ಪಿಸುವುದು, ಜನರಿಗೆ ಸುಳ್ಳು ಭರವಸೆ ನೀಡುವುದೇ ಬಿಜೆಪಿ  ಸರ್ಕಾರ ಬಿಜೆಪಿ ಸರಕಾರದ ವೈಫಲ್ಯ ಹಾಗೂ ಕಾಂಗ್ರೇಸ್ ಸರ್ಕಾರ ಅಧಿಕಾರದ ಅವಧಿಯಲ್ಲಿ ಸಾಕಷ್ಟು ಜನಪರ ಯೋಜನೆಗಳ ಜಾರಿಗೆ ತಂದು ಸಾರ್ವಜನಿಕರಿಗೆ ಸಾಕಷ್ಟು ಸೌಲಭ್ಯಗಳನ್ನು ಕಲ್ಪಿಸಿದೆ. ಕಾಂಗ್ರೆಸ್ ಸರಕಾರದ ಸಾಧನೆಗಳನ್ನು ಮನೆಮನೆಗೆ ಹೋಗಿ ಜನರಲ್ಲಿ ಅರಿವು ಮೂಡಿಸುವ ಮೂಲಕ ಸದಸ್ಯತ್ವ ನೋಂದಣೆ ಜತೆಗೆ ಪಕ್ಷ ಸಂಘಟನೆಗೆ ಮುಂದಾಗುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಸುಮಕ್ಕ, ಉಪಾಧ್ಯಕ್ಷೆ ಆರ್. ಮಂಜುಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಟಿ.ತಿಪ್ಪೇಸ್ವಾಮಿ, ಕಿರಣ್ ಶಂಕರ್, ನಗರಸಭೆ ಸದಸ್ಯರಾದ ರಮೇಶ್ ಗೌಡ, ರಾಘವೇಂದ್ರ, ಸುಮಕ್ಕ ಬರಮಣ್ಣ,  ಮಾಜಿ ಜಿಪಂ ಅಧ್ಯಕ್ಷ ರವಿಕುಮಾರ್, ಕಿರಣ್, ಮುಂಡರಾದ ಕವಿತದಳವಾಯಿಮೂರ್ತಿ,ಡಿ.ಕೆ.ಕಾಟಯ್ಯ, ಸಿ.ಟಿ.ಶ್ರೀನಿವಾಸ ಇತರರಿದ್ದರು.

ಫೊಟೊ ಚಳ್ಳಕೆರ ನಗರದ ಶಾಸಕ ಟಿ.ರಘುಮೂರ್ತಿ ನಿವಾಸದ ಬಳಿ ಪರಶುರಾಂಪುರ ಹಾಗೂ ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ  ಡಿಜಿಟಲ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿ ಮಾತನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು