2:16 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಚಳ್ಳಕೆರೆ ದೊಡ್ಡಉಳ್ಳಾರ್ತಿ ಜಾತ್ರೆ  ಸಮಾಪನ: ಗೌರಿದೇವಿ ವಿಸರ್ಜನೆ; ಮಕ್ಕಳಿಗಾಗಿ ಹೂ ತೊಟ್ಟಿಲ ಸೇವೆ

23/11/2021, 19:16

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲೂಕಿನ ದೊಡ್ಡಉಳ್ಳಾರ್ತಿಯ ಶ್ರೀಗೌರಿದೇವಿ ಜಾತ್ರೆ ಸಡಗರ ಸಂಭ್ರಮದಿಂದ ನಡೆದಿದ್ದು, ಗೌರಿದೇವಿ ವಿಸರ್ಜನೆ ಕಾರ್ಯ ನೆರವೇರಿತು.

ಗೌರಿ ದೇವಿಯ ಮೂರ್ತಿಗೆ ದೀಪಾಲಂಕರದಿಂದ ಶೃಂಗಾರಗೊಳಿಸಿ ದೊಡ್ಡ ಹಬ್ಬದಂತೆ ಆಚರಣೆ ಮಾಡಿದ್ದು ಒಂದು ವಿಶೇಷವಾಗಿತ್ತು. ಗ್ರಾಮದ ಗಂಡನ ಮನೆಯಾದ ವೀರಭದ್ರಸ್ವಾಮಿ ದೇವಾಲಯದಿಂದ ಸಂಪ್ರದಾಯದಂತೆ ಗೌರಿದೇವಿಯನ್ನು ಬೆಳಗಿನ ಜಾವ ಸುಮಾಎಉ 3.30ರಲ್ಲಿ ಎಡೆಮುಡಿ ಮೇಲೆ ಗೌರಿಯನ್ನು ಮೆರವಣಿಗೆಯ ಮೂಲಕ ತವರು ಮನೆಗೆ ಕರೆ ತರಲಾಯಿತು.ಊರಿನಲ್ಲಿ ಗುಡಿ ನಿರ್ಮಿಸಿ ಜಾತ್ರೆ ಮಾಡುತ್ತಿದ್ದರು ಎಂಬ ಪ್ರತೀತಿ ಇದೆ.ನಾವು ಸಹ ಹಿರಿಯರ ಆಶಯದಂತೆ ಮುಂದುವರೆಸಿಕೊಂಡು ಬರಲಾಗಿದೆ ಎಂಬುದು ಭಕ್ತರ ನಂಬಿಕೆ.

ಗೌರಿದೇವಿ ಜಾತ್ರೆ ಮೂಲತಃ ಹೆಣ್ಣು ಮಕ್ಕಳ ಹಬ್ಬ. ದೇವಿಗೆ ಪೂಜಾ ಕೈಂಕರ್ಯ ನಡೆಸುವವರೆಲ್ಲ ಒಪ್ಪತ್ತು ಮಾತ್ರ ಊಟ ಮಾಡಬೇಕು. ಆಚರಣೆಯಂತೆ ವಿದಿವಿಧಾನದಂತೆ ಸಮಂಗಲಿಯರು ಮಧ್ಯೆ ರಾತ್ರಿ ತಣ್ಣಿರಿನ ಸ್ನಾನ ಬಣ್ಣಬಣ್ಣದ ಮಡಿ ಸೀರೆಗಳನ್ನು ಉಟ್ಟುಕೊಂಡು ಮಂಜಾನೆ ದೇವಿಗೆ ಮಹಾ ಮಂಗಳಾರತಿ ಸಮರ್ಪಿಸಿದರು.

ದಿನವೆಲ್ಲ ಉಪವಾಸವಿರುವ ಪುರುಷರು ನಂತರ ರಾತ್ರಿ  ಚಳಿಯನ್ನು ಲೆಕ್ಕಿಸದೆ ತಣ್ಣಿರಿನಲ್ಲಿ ಸ್ನಾನಮಾಡಿ ದೇವಿಯನ್ನು ತವರು ಮನೆಯಿಂದ ಕರೆ ತರುವ ಸಂದರ್ಭದಲ್ಲಿ ಡಿಂಡುರುಳು ಸೇವೆ ಅರ್ಪಿಸಿದರು. ಇವರಿಗೆ ಮಹಿಳೆಯರು ಆರತಿ ಹಿಡಿಯುವ ಮೂಲಕ ಪ್ರೋತ್ಸಾಹ ನೀಡಿ ಚಳಿಯಲ್ಲು ಜಾತ್ರೆ ಕಳೆಕಟ್ಟುವಂತೆ ಮಾಡಿದರು.

ಕಂಕಣ ಬಲ ಕೂಡಿ ಬರಲು, ಒಳ್ಳೆಯ ಪತಿ ದೊರೆಯಲೆಂದು ಯುವತಿಯರು ದಿಂಡುರುಳು ಮತ್ತು ಆರತಿ ಹಿಡಿಯುವ ಹರಕೆ ಅರ್ಪಿಸಿದರು. ಮಕ್ಕಳ ಫಲ ಲಭಿಸಲಿ ಎಂದು ಮಕ್ಕಳಿಲ್ಲದವರು ಹೂವಿನ ತೊಟ್ಟಿಲ ಹರಕೆ ತೀರಿಸಿ ದೇವಿಯಲ್ಲಿ ತಮ್ಮ ಇಷ್ಟಾರ್ಥಗಳನ್ನು ಪುರೈಸು ಎಂಬ ಭಾವ ಮಹಿಳೆಯರಲ್ಲಿ ಎದ್ದು ಕಾಣುತ್ತಿತ್ತು. 

ಇತ್ತೀಚಿನ ಸುದ್ದಿ

ಜಾಹೀರಾತು