10:50 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಡಾ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡದೆ ತಾಲೂಕು ಆಡಳಿತ ನಿರ್ಲಕ್ಷ್ಯ: ದಲಿತ ಮುಖಂಡರ ಟೀಕೆ

27/11/2021, 08:58

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಸರ್ವರಿಗೂ ಸಮಾನತೆ ಒದಗಿಸಿ ಮೂಲಭೂತ ಹಕ್ಕುಗಳನ್ನು ನೀಡಿದ ಸಂವಿಧಾನ ರಚಿಸಿದ ಅಂಬೇಡ್ಕರ್ ಪ್ರತಿಮೆಗೆ ತಾಲೂಕು ಆಡಳಿತ ಮಾಲಾರ್ಪಣೆ ಮಾಡದೆ ನಿರ್ಲವಹಿಸಿದೆ ಎಂದು ದಲಿತ ಮುಖಂಡರು ತಹಶೀಲ್ದಾರ್ ವಿರುದ್ದ ಕಿಡಿ ಕಾರಿದ್ದಾರೆ.

ಭಾರತ ಸಂವಿಧಾನ ದಿನವನ್ನು ಪ್ರತಿ ವರ್ಷ ನವೆಂಬರ್ 26 ರಂದು ಆಚರಣೆ ಮಾಡಲಾಗುತ್ತಿದ್ದು ತಾಲೂಕು ಕಚೇರಿ ಎದುರಲ್ಲೇ ಇರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಲು ತಾಲೂಕು ಆಡಳಿತ ನಿರ್ಲಕ್ಷವಹಿಸಿದೆ ಎಂದು ದಲಿತ ಮುಖಡಂರು ಅಂಬೇಡ್ಕರ್ ಪ್ರತಿಮೆ ಮುಂದೆ ವಿರೋದ ವ್ಯಕ್ತಪಡಿಸಿದ್ದಾರೆ.

ದಲಿತ ಮುಖಂಡರು ವಿರೋಧ ವ್ಯಕ್ತಪಡಿಸಿದನಂತರ ಎಚ್ಚತ್ತ ತಾಲೂಕು ಆಡಳಿತ ಸಿಬ್ಬಂದಿಯನ್ನು ಕಳಿಸಿ ಸ್ವಚ್ಚತೆ ಮಾಡಲು ಮುಂದಾಗಿದ್ದಾರೆ. 

ಜಿಪಂ ಮಾಜಿ ಸದಸ್ಯ ಪ್ರಕಾಶ್ ಮಾತನಾಡಿ 1949 ರ ನವೆಂಬರ್ 26ರಂದು ಸಂವಿಧಾನವನ್ನು ಅಂಗೀಕರಿಸಲಾಯಿತು. ಇದರ ಅಂಗವಾಗಿಯೇ ನಾವು ಇಂದು ಸಂವಿಧಾನ ದಿನವನ್ನು ಸೆಲೆಬ್ರೇಟ್ ಮಾಡುತ್ತಿದ್ದೇವೆ.

ಭಾರತದಲ್ಲಿ ಸಂವಿಧಾನ ಅಂಗೀಕಾರವಾಗಿದ್ದು 1949ರ ನವೆಂಬರ್ 26ರಂದೇ ಆದರೂ ಅನುಷ್ಠಾನಕ್ಕೆ  ತಂದಿದ್ದು 1950ರ ಜನವರಿ 26 ರಂದು. ಈ ದಿನವನ್ನು ಗಣರಾಜ್ಯೋತ್ಸವ ದಿನವಾಗಿ ಆಚರಣೆ ಮಾಡಲಾಗುತ್ತದೆ. ಭಾರತಕ್ಕೆ ಸಂವಿಧಾನವೇ ಬಹುದೊಡ್ಡ ಬಲ. ನಮ್ಮ ಸಂವಿಧಾನ ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ನಗರಸಭೆ ಉಪಾಧ್ಯಕ್ಷ ವಿಜಯ್‍ಕುಮಾರ್, ಎಸ್.ಎಚ್.ಸೈಯಾದ್, ಉಮೇಶ್ ಬ್ಯಾನರ್ಜಿ, ವಿನೋದ್ ಕುಮಾರ್,ಭದ್ರಿ, ಸಿ.ಶ್ರೀನಿವಾಸ್,ಡಿ.ಟಿ. ಭೂತಲಿಂಗಪ್ಪ, ಬೀಮಣ್ಣ, ನಾಗರಾಜ್, ಚಂದ್ರಪ್ಪ, ಅನಿಲ್ ಕುಮಾರ್,  ದಲಿತ  ಇತರರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು