7:54 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಚಳ್ಳಕೆರೆ: ಡಾ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡದೆ ತಾಲೂಕು ಆಡಳಿತ ನಿರ್ಲಕ್ಷ್ಯ: ದಲಿತ ಮುಖಂಡರ ಟೀಕೆ

27/11/2021, 08:58

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಸರ್ವರಿಗೂ ಸಮಾನತೆ ಒದಗಿಸಿ ಮೂಲಭೂತ ಹಕ್ಕುಗಳನ್ನು ನೀಡಿದ ಸಂವಿಧಾನ ರಚಿಸಿದ ಅಂಬೇಡ್ಕರ್ ಪ್ರತಿಮೆಗೆ ತಾಲೂಕು ಆಡಳಿತ ಮಾಲಾರ್ಪಣೆ ಮಾಡದೆ ನಿರ್ಲವಹಿಸಿದೆ ಎಂದು ದಲಿತ ಮುಖಂಡರು ತಹಶೀಲ್ದಾರ್ ವಿರುದ್ದ ಕಿಡಿ ಕಾರಿದ್ದಾರೆ.

ಭಾರತ ಸಂವಿಧಾನ ದಿನವನ್ನು ಪ್ರತಿ ವರ್ಷ ನವೆಂಬರ್ 26 ರಂದು ಆಚರಣೆ ಮಾಡಲಾಗುತ್ತಿದ್ದು ತಾಲೂಕು ಕಚೇರಿ ಎದುರಲ್ಲೇ ಇರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಲು ತಾಲೂಕು ಆಡಳಿತ ನಿರ್ಲಕ್ಷವಹಿಸಿದೆ ಎಂದು ದಲಿತ ಮುಖಡಂರು ಅಂಬೇಡ್ಕರ್ ಪ್ರತಿಮೆ ಮುಂದೆ ವಿರೋದ ವ್ಯಕ್ತಪಡಿಸಿದ್ದಾರೆ.

ದಲಿತ ಮುಖಂಡರು ವಿರೋಧ ವ್ಯಕ್ತಪಡಿಸಿದನಂತರ ಎಚ್ಚತ್ತ ತಾಲೂಕು ಆಡಳಿತ ಸಿಬ್ಬಂದಿಯನ್ನು ಕಳಿಸಿ ಸ್ವಚ್ಚತೆ ಮಾಡಲು ಮುಂದಾಗಿದ್ದಾರೆ. 

ಜಿಪಂ ಮಾಜಿ ಸದಸ್ಯ ಪ್ರಕಾಶ್ ಮಾತನಾಡಿ 1949 ರ ನವೆಂಬರ್ 26ರಂದು ಸಂವಿಧಾನವನ್ನು ಅಂಗೀಕರಿಸಲಾಯಿತು. ಇದರ ಅಂಗವಾಗಿಯೇ ನಾವು ಇಂದು ಸಂವಿಧಾನ ದಿನವನ್ನು ಸೆಲೆಬ್ರೇಟ್ ಮಾಡುತ್ತಿದ್ದೇವೆ.

ಭಾರತದಲ್ಲಿ ಸಂವಿಧಾನ ಅಂಗೀಕಾರವಾಗಿದ್ದು 1949ರ ನವೆಂಬರ್ 26ರಂದೇ ಆದರೂ ಅನುಷ್ಠಾನಕ್ಕೆ  ತಂದಿದ್ದು 1950ರ ಜನವರಿ 26 ರಂದು. ಈ ದಿನವನ್ನು ಗಣರಾಜ್ಯೋತ್ಸವ ದಿನವಾಗಿ ಆಚರಣೆ ಮಾಡಲಾಗುತ್ತದೆ. ಭಾರತಕ್ಕೆ ಸಂವಿಧಾನವೇ ಬಹುದೊಡ್ಡ ಬಲ. ನಮ್ಮ ಸಂವಿಧಾನ ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ನಗರಸಭೆ ಉಪಾಧ್ಯಕ್ಷ ವಿಜಯ್‍ಕುಮಾರ್, ಎಸ್.ಎಚ್.ಸೈಯಾದ್, ಉಮೇಶ್ ಬ್ಯಾನರ್ಜಿ, ವಿನೋದ್ ಕುಮಾರ್,ಭದ್ರಿ, ಸಿ.ಶ್ರೀನಿವಾಸ್,ಡಿ.ಟಿ. ಭೂತಲಿಂಗಪ್ಪ, ಬೀಮಣ್ಣ, ನಾಗರಾಜ್, ಚಂದ್ರಪ್ಪ, ಅನಿಲ್ ಕುಮಾರ್,  ದಲಿತ  ಇತರರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು