7:08 PM Thursday6 - August 2026
ಬ್ರೇಕಿಂಗ್ ನ್ಯೂಸ್
ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಹಾಡಹಗಲೇ ನಡುಬೀದಿಯಲ್ಲಿ ಪತಿಯಿಂದ ಪತ್ನಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ; ಆರೋಪಿ ಬಂಧನ

22/11/2023, 18:16

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಹಾಡಹಗಲೇ ಪತಿಯೊಬ್ಬ ತನ್ನ ಪತ್ನಿಯನ್ನು ನಡುಬೀದಿಯಲ್ಲೇ ಅಮಾನುಷವಾಗಿ ಮಚ್ಚುವಿನಿಂದ ಕಡಿದು ಕೊಲೆ ಮಾಡಲು ಯತ್ನಿಸಿದ ಘಟನೆ ಚಳ್ಳಕೆರೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ.
ಇಲ್ಲಿನ ಬೆಂಗಳೂರು ರಸ್ತೆಯಲ್ಲಿರುವ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಬಳಿ ಬೆಳಗ್ಗೆ ಸುಮಾರು 10 ಗಂಟೆಯ ವೇಳೆಗೆ ಈ ಭೀಕರ ಕೃತ್ಯ ನಡೆದಿದೆ. ಚಳ್ಳಕೆರೆಯ ಚೆನ್ನಮ್ಮ ನಾಗತಿಹಳ್ಳಿಯ ಕುಮಾರ್ ಎಂಬ ಯುವಕ ತನ್ನ ಪತ್ನಿಯ ಮೇಲೆ ಮಚ್ಚಿನಿಂದ ಪ್ರಾಣಾಂತಿಕ ಹಲ್ಲೆ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡ ಗೃಹಿಣಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾಗತಿಹಳ್ಳಿಯ ಕುಮಾರ್ ಎಂಬಾತ 3 ವರ್ಷಗಳ ಹಿಂದೆ ಸಾಣಿಕೆರೆ ಹತ್ತಿರ ಹೆಗ್ಗೆರೆಯ ಯುವತಿಯನ್ನು ವಿವಾಹವಾಗಿದ್ದ. ಈ ನಡುವೆ ಕಳೆದ ಎರಡು ತಿಂಗಳಿನಿಂದ ಗಂಡ- ಹೆಂಡತಿ ನಡುವೆ ಮನಸ್ತಾಪ ಉಂಟಾಗಿತ್ತು. ಈ ವೈಮಸ್ಸು ತೀರಾ ವಿಕೋಪಕ್ಕೆ ಹೋಗಿ ಇವತ್ತು ಪತಿ ಕುಮಾರ್ ತನ್ನ ಹೆಂಡತಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಘಟನೆ ನಡೆದ ಬಳಿಕ ಆರೋಪಿಯನ್ನು ಹಿಡಿದು ಸಾರ್ವಜನಿಕರು ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು