11:37 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಹೆಚ್ಚುತ್ತಿರುವ ಕಳ್ಳತನ, ಲೂಟಿ ಪ್ರಕರಣ; ಪೊಲೀಸ್ ಇಲಾಖೆ, ತಹಶೀಲ್ದಾರ್ ಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಮನವಿ

11/03/2025, 23:11

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳ್ಳತನ, ಲೂಟಿ, ದರೋಡೆ ಹೆಚ್ಚುತ್ತಿದ್ದು, ಜನರು ಭಯಭೀತಿಗೊಂಡಿರುವ ಹಿನ್ನೆಲೆಯಲ್ಲಿ ತಹಶೀಲ್ದಾರ್ ಹಾಗೂ ಪೊಲೀಸ್ ಇಲಾಖೆಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಪರವಾಗಿ ಮನವಿ ಸಲ್ಲಿಸಲಾಯಿತು.
ಕಳೆದ ಎರಡು ತಿಂಗಳಿಂದ ಚಳ್ಳಕೆರೆ ತಾಲೂಕಿನಲ್ಲಿ ಸರಣಿ ಕಳ್ಳತನ ಹೆಚ್ಚಾಗಿದ್ದು. ಹಳ್ಳಿಯಿಂದ ಚಳ್ಳಕೆರೆಗೆ ಬರುವ ಬ್ಯಾಂಕಿನಲ್ಲಿ ವ್ಯವಹರಿಸುವ ಜನರಲ್ಲಿ ಆತಂಕ ಉಂಟು ಮಾಡಿದೆ. ಕಳೆದ ಎರಡು ತಿಂಗಳಿಂದ ವಾಸವಿ ಮಹಲ್ ಹತ್ತಿರ, ಶಾಂತಿನಗರ,vವಾಸವಿ ಕಾಲೋನಿ. ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ, ಸಂತೆ ಮಾರುಕಟ್ಟೆ, ಸಚಿವ ಸುಧಾಕರ್ ರವರ ಮನೆಯ ಹತ್ತಿರ ಹೀಗೆ
ಚೈನ್ ಕಳ್ಳತನ, ಮೊಬೈಲ್ ಕಳೆತನ, ಬೈಕ್ ಕಳ್ಳತನ, ಬ್ಯಾಂಕ್ ಇಂದ ಡ್ರಾ ಮಾಡಿಕೊಂಡು ಬಂದಿರುವ ಹಣ ಲೂಟಿ ಮಾಡುವುದು, ಒಂಟಿ ಮಹಿಳೆ ವಾಸಿಸುವ ಇರುವ ಮನೆಗೆ ನುಗ್ಗಿ ಚಿನ್ನಾಭರಣ ಕಳವು ನಡೆದಿದೆ.

ಇದುವರೆಗೂ ಕಳ್ಳರ ಸುಳಿವು ಸಿಕ್ಕಿಲ್ಲ. ಆದಷ್ಟು ಬೇಗ ಪೊಲೀಸ್ ಇಲಾಖೆಯು ಈ ಐನಾತಿ ಕಳ್ಳರನ್ನು ಹಿಡಿದು ಬಂಧಿಸಬೇಕು. ಚಳ್ಳಕೆರೆಯ ಜನರಲ್ಲಿ ಭಯದ ವಾತಾವರಣವನ್ನು ಮುಕ್ತಗೊಳಿಸಿ ನಿರಳತೆಯನ್ನು ಉಂಟುಮಾಡಲಿ ಎಂದು ಚಳ್ಳಕೆರೆಯ ತಹಶೀಲ್ದಾರ್ ಹಾಗೂ ಡಿವೈಎಸ್ಪಿ ರಾಜಣ್ಣ ಅವರಿಗೆ ಕರ್ನಾಟಕ ಯುವರಕ್ಷಣಾ ವೇದಿಕೆ ಪರವಾಗಿ ಮನವಿ ಸಲ್ಲಿಸಿದೆ.
ಚಳ್ಳಕೆರೆ ತಾಲ್ಲೂಕು ಘಟಕದ ಕರ್ನಾಟಕ ಯುವರಕ್ಷಣಾ ವೇದಿಕೆಯ ಅಧ್ಯಕ್ಷರಾದ ಮೈಲಾರಸ್ವಾಮಿ, ತಾಲೂಕು ಪ್ರಧಾನ ಕಾರ್ಯದರ್ಶಿ ಹಾಲೇಶ್ ಯಾದವ್ ಬೆಳಗೆರೆ. ನಗರ ಉಪಾಧ್ಯಕ್ಷರಾದ ಜಯಣ್ಣ. ತಾಲೂಕ ಕಾರ್ಯಧ್ಯಕ್ಷರಾದ ಶಿವಪುತ್ರ. ಕಾರ್ಯದರ್ಶಿಯಾದ ಗೌಡ ಯಾದವ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು