4:16 AM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಹೆಚ್ಚುತ್ತಿರುವ ಕಳ್ಳತನ, ಲೂಟಿ ಪ್ರಕರಣ; ಪೊಲೀಸ್ ಇಲಾಖೆ, ತಹಶೀಲ್ದಾರ್ ಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಮನವಿ

11/03/2025, 23:11

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳ್ಳತನ, ಲೂಟಿ, ದರೋಡೆ ಹೆಚ್ಚುತ್ತಿದ್ದು, ಜನರು ಭಯಭೀತಿಗೊಂಡಿರುವ ಹಿನ್ನೆಲೆಯಲ್ಲಿ ತಹಶೀಲ್ದಾರ್ ಹಾಗೂ ಪೊಲೀಸ್ ಇಲಾಖೆಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಪರವಾಗಿ ಮನವಿ ಸಲ್ಲಿಸಲಾಯಿತು.
ಕಳೆದ ಎರಡು ತಿಂಗಳಿಂದ ಚಳ್ಳಕೆರೆ ತಾಲೂಕಿನಲ್ಲಿ ಸರಣಿ ಕಳ್ಳತನ ಹೆಚ್ಚಾಗಿದ್ದು. ಹಳ್ಳಿಯಿಂದ ಚಳ್ಳಕೆರೆಗೆ ಬರುವ ಬ್ಯಾಂಕಿನಲ್ಲಿ ವ್ಯವಹರಿಸುವ ಜನರಲ್ಲಿ ಆತಂಕ ಉಂಟು ಮಾಡಿದೆ. ಕಳೆದ ಎರಡು ತಿಂಗಳಿಂದ ವಾಸವಿ ಮಹಲ್ ಹತ್ತಿರ, ಶಾಂತಿನಗರ,vವಾಸವಿ ಕಾಲೋನಿ. ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ, ಸಂತೆ ಮಾರುಕಟ್ಟೆ, ಸಚಿವ ಸುಧಾಕರ್ ರವರ ಮನೆಯ ಹತ್ತಿರ ಹೀಗೆ
ಚೈನ್ ಕಳ್ಳತನ, ಮೊಬೈಲ್ ಕಳೆತನ, ಬೈಕ್ ಕಳ್ಳತನ, ಬ್ಯಾಂಕ್ ಇಂದ ಡ್ರಾ ಮಾಡಿಕೊಂಡು ಬಂದಿರುವ ಹಣ ಲೂಟಿ ಮಾಡುವುದು, ಒಂಟಿ ಮಹಿಳೆ ವಾಸಿಸುವ ಇರುವ ಮನೆಗೆ ನುಗ್ಗಿ ಚಿನ್ನಾಭರಣ ಕಳವು ನಡೆದಿದೆ.

ಇದುವರೆಗೂ ಕಳ್ಳರ ಸುಳಿವು ಸಿಕ್ಕಿಲ್ಲ. ಆದಷ್ಟು ಬೇಗ ಪೊಲೀಸ್ ಇಲಾಖೆಯು ಈ ಐನಾತಿ ಕಳ್ಳರನ್ನು ಹಿಡಿದು ಬಂಧಿಸಬೇಕು. ಚಳ್ಳಕೆರೆಯ ಜನರಲ್ಲಿ ಭಯದ ವಾತಾವರಣವನ್ನು ಮುಕ್ತಗೊಳಿಸಿ ನಿರಳತೆಯನ್ನು ಉಂಟುಮಾಡಲಿ ಎಂದು ಚಳ್ಳಕೆರೆಯ ತಹಶೀಲ್ದಾರ್ ಹಾಗೂ ಡಿವೈಎಸ್ಪಿ ರಾಜಣ್ಣ ಅವರಿಗೆ ಕರ್ನಾಟಕ ಯುವರಕ್ಷಣಾ ವೇದಿಕೆ ಪರವಾಗಿ ಮನವಿ ಸಲ್ಲಿಸಿದೆ.
ಚಳ್ಳಕೆರೆ ತಾಲ್ಲೂಕು ಘಟಕದ ಕರ್ನಾಟಕ ಯುವರಕ್ಷಣಾ ವೇದಿಕೆಯ ಅಧ್ಯಕ್ಷರಾದ ಮೈಲಾರಸ್ವಾಮಿ, ತಾಲೂಕು ಪ್ರಧಾನ ಕಾರ್ಯದರ್ಶಿ ಹಾಲೇಶ್ ಯಾದವ್ ಬೆಳಗೆರೆ. ನಗರ ಉಪಾಧ್ಯಕ್ಷರಾದ ಜಯಣ್ಣ. ತಾಲೂಕ ಕಾರ್ಯಧ್ಯಕ್ಷರಾದ ಶಿವಪುತ್ರ. ಕಾರ್ಯದರ್ಶಿಯಾದ ಗೌಡ ಯಾದವ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು