11:24 AM Wednesday12 - March 2025
ಬ್ರೇಕಿಂಗ್ ನ್ಯೂಸ್
Education | ಗುಣಮಟ್ಟದ, ಕೌಶಲ್ಯಾಧಾರಿತ ಶಿಕ್ಷಣ ನೀಡುವುದು ಸರ್ಕಾರದ ಗುರಿ: ಸಚಿವ ಡಾ.ಎಂ.ಸಿ… ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆಗೆ ಬಿಜೆಪಿ ವಿರೋಧ; ಇದು ಸಂವಿಧಾನ ವಿರೋಧಿ: ಪ್ರತಿಪಕ್ಷ… Global warming | ಹೆಚ್ಚುತ್ತಿರುವ ತಾಪಮಾನ: ಮೈಸೂರು ಝೂ ಪ್ರಾಣಿಗಳಿಗೆ ವಾಟರ್ ಜೆಟ್,… ರಂಜಾನ್ ಮಾಸ: ಸಮೋಸಕ್ಕೆ ಭಾರೀ ಡಿಮಾಂಡ್; ಪ್ರತಿದಿನ 15 ಸಾವಿರಕ್ಕೂ ಹೆಚ್ಚು ಮಾರಾಟ ರೈತರ ಐಪಿ ಸೆಟ್‌ಗಳಿಗೆ ಹೆಚ್ಚುವರಿ 2 ತಾಸು ವಿದ್ಯುತ್‌ ಪೂರೈಕೆ ಬಗ್ಗೆ ಸರಕಾರ… Higher Education | ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಗುಣಮಟ್ಟ ಹೆಚ್ಚಿಸಲು ಆದ್ಯತೆ::ಉನ್ನತ ಶಿಕ್ಷಣ ಸಚಿವ… APMC BILL | ಎಪಿಎಂಸಿ ನಿಯಂತ್ರಣಕ್ಕೆ ಇ-ಫ್ಲಾಟ್ಫಾರಂಗಳು ತಿದ್ದುಪಡಿ ವಿಧೇಯಕ: ವಿಧಾನಸಭೆ ಅನುಮೋದನೆ Power For Farmers | ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆಗಳ… Education | ಶಿಕ್ಷಣ ಇಲಾಖೆಯಲ್ಲಿ ಶೇ. 80ರಷ್ಟು ಹುದ್ದೆಗಳ ಭರ್ತಿಗೆ ಕ್ರಮ: ಸಚಿವ… Govt Hospital | ಇನ್ನು ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಬೆಳಿಗ್ಗೆ 9ರಿಂದ ಸಂಜೆ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಹೆಚ್ಚುತ್ತಿರುವ ಕಳ್ಳತನ, ಲೂಟಿ ಪ್ರಕರಣ; ಪೊಲೀಸ್ ಇಲಾಖೆ, ತಹಶೀಲ್ದಾರ್ ಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಮನವಿ

11/03/2025, 23:11

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳ್ಳತನ, ಲೂಟಿ, ದರೋಡೆ ಹೆಚ್ಚುತ್ತಿದ್ದು, ಜನರು ಭಯಭೀತಿಗೊಂಡಿರುವ ಹಿನ್ನೆಲೆಯಲ್ಲಿ ತಹಶೀಲ್ದಾರ್ ಹಾಗೂ ಪೊಲೀಸ್ ಇಲಾಖೆಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಪರವಾಗಿ ಮನವಿ ಸಲ್ಲಿಸಲಾಯಿತು.
ಕಳೆದ ಎರಡು ತಿಂಗಳಿಂದ ಚಳ್ಳಕೆರೆ ತಾಲೂಕಿನಲ್ಲಿ ಸರಣಿ ಕಳ್ಳತನ ಹೆಚ್ಚಾಗಿದ್ದು. ಹಳ್ಳಿಯಿಂದ ಚಳ್ಳಕೆರೆಗೆ ಬರುವ ಬ್ಯಾಂಕಿನಲ್ಲಿ ವ್ಯವಹರಿಸುವ ಜನರಲ್ಲಿ ಆತಂಕ ಉಂಟು ಮಾಡಿದೆ. ಕಳೆದ ಎರಡು ತಿಂಗಳಿಂದ ವಾಸವಿ ಮಹಲ್ ಹತ್ತಿರ, ಶಾಂತಿನಗರ,vವಾಸವಿ ಕಾಲೋನಿ. ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ, ಸಂತೆ ಮಾರುಕಟ್ಟೆ, ಸಚಿವ ಸುಧಾಕರ್ ರವರ ಮನೆಯ ಹತ್ತಿರ ಹೀಗೆ
ಚೈನ್ ಕಳ್ಳತನ, ಮೊಬೈಲ್ ಕಳೆತನ, ಬೈಕ್ ಕಳ್ಳತನ, ಬ್ಯಾಂಕ್ ಇಂದ ಡ್ರಾ ಮಾಡಿಕೊಂಡು ಬಂದಿರುವ ಹಣ ಲೂಟಿ ಮಾಡುವುದು, ಒಂಟಿ ಮಹಿಳೆ ವಾಸಿಸುವ ಇರುವ ಮನೆಗೆ ನುಗ್ಗಿ ಚಿನ್ನಾಭರಣ ಕಳವು ನಡೆದಿದೆ.

ಇದುವರೆಗೂ ಕಳ್ಳರ ಸುಳಿವು ಸಿಕ್ಕಿಲ್ಲ. ಆದಷ್ಟು ಬೇಗ ಪೊಲೀಸ್ ಇಲಾಖೆಯು ಈ ಐನಾತಿ ಕಳ್ಳರನ್ನು ಹಿಡಿದು ಬಂಧಿಸಬೇಕು. ಚಳ್ಳಕೆರೆಯ ಜನರಲ್ಲಿ ಭಯದ ವಾತಾವರಣವನ್ನು ಮುಕ್ತಗೊಳಿಸಿ ನಿರಳತೆಯನ್ನು ಉಂಟುಮಾಡಲಿ ಎಂದು ಚಳ್ಳಕೆರೆಯ ತಹಶೀಲ್ದಾರ್ ಹಾಗೂ ಡಿವೈಎಸ್ಪಿ ರಾಜಣ್ಣ ಅವರಿಗೆ ಕರ್ನಾಟಕ ಯುವರಕ್ಷಣಾ ವೇದಿಕೆ ಪರವಾಗಿ ಮನವಿ ಸಲ್ಲಿಸಿದೆ.
ಚಳ್ಳಕೆರೆ ತಾಲ್ಲೂಕು ಘಟಕದ ಕರ್ನಾಟಕ ಯುವರಕ್ಷಣಾ ವೇದಿಕೆಯ ಅಧ್ಯಕ್ಷರಾದ ಮೈಲಾರಸ್ವಾಮಿ, ತಾಲೂಕು ಪ್ರಧಾನ ಕಾರ್ಯದರ್ಶಿ ಹಾಲೇಶ್ ಯಾದವ್ ಬೆಳಗೆರೆ. ನಗರ ಉಪಾಧ್ಯಕ್ಷರಾದ ಜಯಣ್ಣ. ತಾಲೂಕ ಕಾರ್ಯಧ್ಯಕ್ಷರಾದ ಶಿವಪುತ್ರ. ಕಾರ್ಯದರ್ಶಿಯಾದ ಗೌಡ ಯಾದವ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು