6:51 AM Sunday10 - August 2025
ಬ್ರೇಕಿಂಗ್ ನ್ಯೂಸ್
Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್… ಅತ್ತೂರುಕೊಲ್ಲಿ ಅದಿವಾಸಿಗಳ ಪರ ಹೋರಾಟ: ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ… Bangalore | ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ: ವಂದೇ ಭಾರತ್ ಎಕ್ಸ್ ಪ್ರೆಸ್… ರಾಹುಲ್‌ ಗಾಂಧಿಯದ್ದು ಠುಸ್‌ ಪಟಾಕಿ, ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ಅಥವಾ ಬಿಜೆಪಿಯ… ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಕೊಕ್ಕಡದಲ್ಲಿ ಬಂಧನ ಆಲಮಟ್ಟಿ ಡ್ಯಾಮ್ ಎತ್ತರ 524 ಮೀಟರ್‌ಗೆ ಹೆಚ್ಚಿಸುವುದು ಕರ್ನಾಟಕದ ಹಕ್ಕು: ಕೇಂದ್ರ ಜಲಶಕ್ತಿ… Chikkamagaluru | ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಉಪಟಳ: ಹೆದ್ದಾರಿ, ಕಾಫಿ ತೋಟದಲ್ಲಿಯೂ ದಾಂಧಲೆ ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಅಳಿವಿನoಚಿನಲ್ಲಿರುವ ನೀರು ನಾಯಿಗಳ ಕಳ್ಳಬೇಟೆ: ಪ್ರಾಣಿ ಪ್ರಿಯರಿಂದ ಕಾರ್ಯಾಚರಣೆ ಮುತ್ತಾಲಿಕ್ ಜತೆ ವೇದಿಕೆ ಹಂಚಿಕೊಂಡ ಕೈ ಶಾಸಕಿ: ನಯನಾ ಮೋಟಮ್ಮ ವಿರುದ್ಧ ಪ್ರಾಯಶ್ಚಿತ್ತ… ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಚಳ್ಳಕೆರೆ: ಕರ್ನಾಟಕ ಯುವ ರಕ್ಷಣಾ ವೇದಿಕೆಯ ಪೂರ್ವಭಾವಿ ಸಭೆ

20/12/2024, 20:27

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಕರ್ನಾಟಕ ಯುವ ರಕ್ಷಣಾ ವೇದಿಕೆಯ ಪೂರ್ವಭಾವಿ ಸಭೆ
ಚಳ್ಳಕೆರೆಯ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆಸಲಾಯಿತು.
ಪೂರ್ವಭಾವಿ ಸಭೆಗೆ ರಾಜ್ಯ ಅಧ್ಯಕ್ಷ ಹಾಗೂ ಸಂಸ್ಥಾಪಕರಾದ ಸುನಿಲ್ ಎಂ. ಎಸ್. ಅವರು ಆಗಮಿಸಿದ್ದರು. ಪೂರ್ವಭಾವಿ ಸಭೆಯ ಉದ್ದೇಶ ದಿನೇ ದಿನೇ ಕರ್ನಾಟಕ ಯುವ ರಕ್ಷಣಾ ವೇದಿಕೆ ರಾಜ್ಯದಲ್ಲಿ ಸಂಚಲನ ಮೂಡಿಸುತ್ತಿದೆ. ಹಾಗೆ ಇಂದು ಚಳ್ಳಕೆರೆ ತಾಲೂಕಿನಲ್ಲಿ 66 ಜನ ಸಂಘಟನೆಗೆ ಸೇರಿದ್ದಾರೆ ಮತ್ತು ಸಂಘಟನೆಯ ಮಹತ್ವ ಉದ್ದೇಶಗಳು ಯಾವ ರೀತಿ ನಾವು ಸಬಲೀಕರಣ ಆಗಬೇಕು. ಅನ್ಯಾಯ ವಿರುದ್ಧ ಯಾವ ರೀತಿ ಧ್ವನಿ ಎತ್ತಬೇಕು, ಸಂಘಟನೆಯಿಂದ ಆಗುವ ಅನುಕೂಲಗಳು ಯಾವ ರೀತಿ ನಾವು ಬಳಸಿಕೊಳ್ಳಬೇಕು ಎಂದು ಮಹತ್ವವಾದ ಅಂಶಗಳನ್ನು ತಿಳಿಸಿಕೊಟ್ಟರು. ಕರ್ನಾಟಕ ಯುವ ರಕ್ಷಣಾ ವೇದಿಕೆಯ ಕನ್ನಡ ಮಾಧ್ಯಮ24/7 ಚಾನಲ್ ಸದ್ಯದಲ್ಲೇ ಬಿಡುಗಡೆ ಆಗುತ್ತೆ ರಾಜ್ಯಾದ್ಯಂತ ಅದನ್ನು ಉತ್ತಮವಾಗಿ ಬಳಸಿಕೊಳ್ಳಿ ಎಂದು ಸಭೆಯನ್ನು ಉದ್ದೇಶಿಸಿ ಹೇಳಿದರು.
ಸಭೆಗೆ ಜಿಲ್ಲಾಧ್ಯಕ್ಷರಾದ ಮೋಹನ್ ಕುಮಾರ್, ತಾಲೂಕು ಅಧ್ಯಕ್ಷರಾದ ಮೈಲಾರ ಸ್ವಾಮಿ, ತಾಲೂಕು ಪ್ರಧಾನ ಕಾರ್ಯದರ್ಶಿಯಾದ ಹಾಲೇಶ್ ಯಾದವ್, ಬೆಳಗೆರೆ ತಾಲೂಕು ಕಾರ್ಯಾಧ್ಯಕ್ಷ ಶಿವಪುತ್ರ, ತಾಲೂಕು ನಗರ ಘಟಕದ ಅಧ್ಯಕ್ಷರಾದ ಮಾರುತಿ ಇನ್ನು ಮುಂತಾದ ಅನೇಕ ಪದಾಧಿಕಾರಿಗಳು, ಉಪಾಧ್ಯಕ್ಷರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು