7:42 AM Sunday18 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಚಳ್ಳಕೆರೆ ಮೂಲ ಸೌಕರ್ಯ ಸಮಸ್ಯೆ: ನಗರಸಭೆ ಆಯುಕ್ತರಿಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಮನವಿ

21/12/2024, 22:47

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಕರ್ನಾಟಕ ಯುವ ರಕ್ಷಣಾ ವೇದಿಕೆ ಚಳ್ಳಕೆರೆ ತಾಲೂಕು ಸಮಿತಿ ವತಿಯಿಂದ ಶನಿವಾರ ನಗರಸಭಾ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ಯುವರಕ್ಷಣಾ ವೇದಿಕೆ ಅಧ್ಯಕ್ಷರ ಹಾಗೂ ಸಂಸ್ಥಾಪಕ ಸುನಿಲ್ ಎಂ.ಎಸ್. ಅವರು ಮನವಿ ಸಲ್ಲಿಸಿದರು.
ಇತ್ತೀಚಿನ ದಿನಗಳಲ್ಲಿ ಚಳ್ಳಕೆರೆ ವೈಜ್ಞಾನಿಕವಾಗಿ ಉತ್ತಮ ಮಟ್ಟ ಅಭಿವೃದ್ಧಿ ಹೊಂದಿದ್ದು ಇಲ್ಲಿನ ಅನೇಕ ಸಮಸ್ಯೆಗಳಾದ ನಗರದ ರಸ್ತೆಗಳು ಹಾಗೂ ನಾಮಫಲಕದ ಅಳವಡಿಕೆ ಮತ್ತು ನಗರ ಸ್ವಚ್ಛತೆ ಕಾಪಾಡುವುದು ಹಾಗೆ ಖಾಸಗಿ ಬಸ್ ನಿಲ್ದಾಣ ಅರ್ಧ ಕೆಲಸವಾಗಿ ನಿಂತಿದೆ. ಇದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಓಡಾಲು ತುಂಬಾ ಸಮಸ್ಯೆಯಾಗುತ್ತಿದೆ. ಸ್ವಚ್ಛತೆ ಇಲ್ಲದೆ ಅವ್ಯವಸ್ಥೆ ನಿರ್ಮಾಣವಾಗಿದೆ. ಹಾಗೆ ರೈತರ ಮಾರುಕಟ್ಟೆ ಅವ್ಯವಸ್ಥೆಯಿಂದ ಕೂಡಿದ್ದು ಮಾರುಕಟ್ಟೆಗೆ ಬರುವ ರೈತರು ತುಂಬಾ ಇರುಸು ಮರುಸು ಆಗಿದೆ. ಸುಖ ಸುಮ್ಮನೆ ಫ್ಲೆಕ್ಸ್ ಗಳನ್ನು ದಾರಿಗಳಿಗೆ ಅಡ್ಡಗಟ್ಟಿ ಹಾಕುತ್ತಿದ್ದಾರೆ. ದಯವಿಟ್ಟು ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸಬೇಕೆಂದು ನಗರ ಆಯುಕ್ತರಿಗೆ ಮನವಿ ಅರ್ಪಿಸಿದರು.
ಚಿತ್ರದುರ್ಗದ ಜಿಲ್ಲಾಧ್ಯಕ್ಷ ಪಿ. ಮೋಹನ್ ಕುಮಾರ್, ಚಳ್ಳಕೆರೆ ತಾಲೂಕು ಅಧ್ಯಕ್ಷ ಮೈಲಾರ ಸ್ವಾಮಿ, ನಗರ ಘಟಕದ ಅಧ್ಯಕ್ಷ ಮಾರುತಿ ಜಿ., ತಾಲೂಕು ಪ್ರಧಾನ ಕಾರ್ಯದರ್ಶಿ ಹಾಲೇಶ್ ಯಾದವ್ ಬೆಳಗೆರೆ,
ಕಾರ್ಮಿಕ ಘಟಕದ ಅಧ್ಯಕ್ಷ ಉಪೇಂದ್ರ ಯಾದವ್,
ನಗರ ಸಹ ಕಾರದರ್ಶಿ ಶ್ರೀನಿವಾಸ್, ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು