10:41 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಚಳ್ಳಕೆರೆ ಮೂಲ ಸೌಕರ್ಯ ಸಮಸ್ಯೆ: ನಗರಸಭೆ ಆಯುಕ್ತರಿಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಮನವಿ

21/12/2024, 22:47

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಕರ್ನಾಟಕ ಯುವ ರಕ್ಷಣಾ ವೇದಿಕೆ ಚಳ್ಳಕೆರೆ ತಾಲೂಕು ಸಮಿತಿ ವತಿಯಿಂದ ಶನಿವಾರ ನಗರಸಭಾ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ಯುವರಕ್ಷಣಾ ವೇದಿಕೆ ಅಧ್ಯಕ್ಷರ ಹಾಗೂ ಸಂಸ್ಥಾಪಕ ಸುನಿಲ್ ಎಂ.ಎಸ್. ಅವರು ಮನವಿ ಸಲ್ಲಿಸಿದರು.
ಇತ್ತೀಚಿನ ದಿನಗಳಲ್ಲಿ ಚಳ್ಳಕೆರೆ ವೈಜ್ಞಾನಿಕವಾಗಿ ಉತ್ತಮ ಮಟ್ಟ ಅಭಿವೃದ್ಧಿ ಹೊಂದಿದ್ದು ಇಲ್ಲಿನ ಅನೇಕ ಸಮಸ್ಯೆಗಳಾದ ನಗರದ ರಸ್ತೆಗಳು ಹಾಗೂ ನಾಮಫಲಕದ ಅಳವಡಿಕೆ ಮತ್ತು ನಗರ ಸ್ವಚ್ಛತೆ ಕಾಪಾಡುವುದು ಹಾಗೆ ಖಾಸಗಿ ಬಸ್ ನಿಲ್ದಾಣ ಅರ್ಧ ಕೆಲಸವಾಗಿ ನಿಂತಿದೆ. ಇದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಓಡಾಲು ತುಂಬಾ ಸಮಸ್ಯೆಯಾಗುತ್ತಿದೆ. ಸ್ವಚ್ಛತೆ ಇಲ್ಲದೆ ಅವ್ಯವಸ್ಥೆ ನಿರ್ಮಾಣವಾಗಿದೆ. ಹಾಗೆ ರೈತರ ಮಾರುಕಟ್ಟೆ ಅವ್ಯವಸ್ಥೆಯಿಂದ ಕೂಡಿದ್ದು ಮಾರುಕಟ್ಟೆಗೆ ಬರುವ ರೈತರು ತುಂಬಾ ಇರುಸು ಮರುಸು ಆಗಿದೆ. ಸುಖ ಸುಮ್ಮನೆ ಫ್ಲೆಕ್ಸ್ ಗಳನ್ನು ದಾರಿಗಳಿಗೆ ಅಡ್ಡಗಟ್ಟಿ ಹಾಕುತ್ತಿದ್ದಾರೆ. ದಯವಿಟ್ಟು ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸಬೇಕೆಂದು ನಗರ ಆಯುಕ್ತರಿಗೆ ಮನವಿ ಅರ್ಪಿಸಿದರು.
ಚಿತ್ರದುರ್ಗದ ಜಿಲ್ಲಾಧ್ಯಕ್ಷ ಪಿ. ಮೋಹನ್ ಕುಮಾರ್, ಚಳ್ಳಕೆರೆ ತಾಲೂಕು ಅಧ್ಯಕ್ಷ ಮೈಲಾರ ಸ್ವಾಮಿ, ನಗರ ಘಟಕದ ಅಧ್ಯಕ್ಷ ಮಾರುತಿ ಜಿ., ತಾಲೂಕು ಪ್ರಧಾನ ಕಾರ್ಯದರ್ಶಿ ಹಾಲೇಶ್ ಯಾದವ್ ಬೆಳಗೆರೆ,
ಕಾರ್ಮಿಕ ಘಟಕದ ಅಧ್ಯಕ್ಷ ಉಪೇಂದ್ರ ಯಾದವ್,
ನಗರ ಸಹ ಕಾರದರ್ಶಿ ಶ್ರೀನಿವಾಸ್, ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು