10:48 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ನಾಯಕನಹಟ್ಟಿ ಕೆರೆಯಲ್ಲಿ ಅಕ್ರಮ ಶೆಡ್ ನಿರ್ಮಾಣ: ಸಣ್ಣ ನೀರಾವರಿ ಇಲಾಖೆಯಿಂದ ತೆರವು

05/02/2022, 11:54

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ನಾಯಕನಹಟ್ಡಿ ಕೆರೆಯಲ್ಲಿ ಅಕ್ರಮವಾಗಿ ಶೆಡ್ ನಿರ್ಮಿಸಿ ಅದನ್ನೇ ಪ್ರಾರ್ಥನಾ ಮಂದಿರ ಮಾಡಿಕೊಳ್ಳುತ್ತಿದ್ದಾರೆ ಎಂಬ ದೂರಿನ ಮೇರೆಗೆ ಸಣ್ಣ ನೀರಾವರಿ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಪೊಲೀಸ್ ಇಲಾಖೆಯ ನೆರವಿನಿಂದ ಶೆಡ್ ತೆರವುಗೊಳಿಸಿದ್ದಾರೆ.ಚಳ್ಳಕೆರೆ ತಾಲೂಕಿನ ನಾಯಕನಹಟ್ಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ  ರಿ.ಸಂ ನಂ ೧೩೧ ರಲ್ಲಿ ಸಣ್ಣ ನೀರಾವರಿ ಇಲಾಖೆಗೆ ಸೇರಿದ ಸಣ್ಣಕೆರೆಯಲ್ಲಿ ಸುಮಾರು ಗುಂಟೆ ಭೂಮಿಯನ್ನು ಅಕ್ರಮ ಒತ್ತುವರಿ ಮಾಡಿಕೊಂಡು ಪ್ರಾರ್ಥನಾ ಮಂದಿರ ನಿರ್ಮಿಸಿ ಮತಾಂತರ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಯಲ್ಲಿ ತಹಶೀಲ್ದಾರ್ ಎನ್. ರಘುಮೂರ್ತಿ ಆದೇಶದಂತೆ ತೆರವು ಕಾರ್ಯ ನಡೆಯಿತು.


ಐತಿಹಾಸಿಕೆ ಸಣ್ಣ ಕೆರೆಯಲ್ಲಿ ಅಂದಾಜು ೫ ಗುಂಟೆ ವಿಸ್ತೀರ್ಣದಲ್ಲಿ ನಾಯಕನಹಟ್ಟಿ ಪಟ್ಟಣದ ರಮೇಶ್ ಪಾಲಯ್ಯ ಎನ್ನುವ ವ್ಯಕ್ತಿ ಕಳೆದ ಸುಮಾರು ದಿನಗಳಿಂದ ಅನಧಿಕೃತವಾಗಿ ಸೀಟಿನ ಸೆಡ್ಡು ನಿರ್ಮಿಸಿಕೊಂಡಿದ್ದು ಇವರು ಅನಧಿಕೃತವಾಗಿ ಒತ್ತುವರಿ ಮಾಡಿಸ್ದರು. ಈ ಬಗ್ಗೆ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಸಣ್ಣ ನೀರಾವರಿ ಇಲಾಖೆ ಯವರು ಪ್ರಸ್ತಾಪಿಸಿದ್ದು, ನ್ಯಾಯಾಲಯವು ಈ ಒತ್ತುವರಿ ತೆರವುಗೊಳಿಸುವಂತೆ ಆದೇಶ  ನೀಡಿತ್ತು.


ಆದರೆ ಶೆಡನ್ನು ಇದುವರೆಗೂ ತೆರವುಗೊಳಿಸಿರಲಿಲ್ಲ ಈ ಮಧ್ಯೆ ಈ ಸೀಟಿನ ಶೆಡ್ ನಲ್ಲಿ ಪ್ರಾರ್ಥನಾ  ಮಂದಿರ ತೆರೆಯಲಾಯಿತು. ಮತಾಂತರಕ್ಕೆ   ಪ್ರಚೋದನೆ ನೀಡಲು ಈ  ಶೆಡ್ ಬಳಕೆಯಾಗುತ್ತಿದೆ ಎಂದು ಸ್ಥಳೀಯರು ಸಣ್ಣ ನೀರಾವರಿ ಇಲಾಖೆಗೆ ಹಾಗೂ ಕಂದಾಯ ಇಲಾಖೆ ದೂರು ನೀಡಿದ್ದರು.

ಅಕ್ರಮವಾಗಿ ಚರ್ಚ್ ನಿರ್ಮಿಸಿಕೊಂಡ  ರಮೇಶ್‌ಗೆ ಕಂದಾಯ ಇಲಾಖೆಯಿಂದ ತಿಳುವಳಿಕೆ ನೋಟಿಸ್ ಜಾರಿ ಮಾಡಿದರೂ ತೆರವುಗೊಳಿಸಿದ ಹಿನ್ನೆಯಲ್ಲಿ ಸ್ಥಳಕ್ಕೆ  ತಹಶೀಲ್ದಾರ್ ಎನ್.ಎರಘುಮೂರ್ತಿ, ವೃತ್ತ ನಿರೀಕ್ಷಕ ರಮಕಾಂತ್ ತಳಕು, ಪಿಎಸ್‌ಐ  ಮಾರುತಿ ನಾಯಕನಹಟ್ಟಿ, ಪಿಎಸ್‌ಐ ಮಹೇಶ್, ಲಕ್ಷ್ಮಣ್ ಹೊಸಪೇಟೆ, ಎಎಸ್‌ಐ ನಾಗರಾಜ್, ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್  ಚನ್ನಬಸಪ್ಪ, ರವಿಕುಮಾರ್, ಕೆರೆ ಪ್ರಾಧಿಕಾರ ಕಾರ್ಯನಿರ್ವಹಣಾಧಿಕಾರಿ ಮಲ್ಲಿಕಾರ್ಜುನ ನಾಯಕನಹಟ್ಟಿ , ಪಟ್ಟಣ ಪಂಚಾಯಿತಿ ಪೌರಾಯುಕ್ತ ಕೋಡಿ ಭೀಮರಾವ್ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಅಕ್ರಮ ಚರ್ಚು ಸ್ಥಳಕ್ಕೆ ಭೇಟಿ ನೀಡಿ ಜೆಸಿಬಿ ಯಂತ್ರಗಳ ಸಹಾದಿಂದ ನೆಲಸಮ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು