7:38 PM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಪದೇ ಪದೇ ಬಣವೆಗಳಿಗೆ ಬೆಂಕಿ: ಗಾಡಿ ಗಾಡಿ ಶೇಂಗಾ ಬೆಂಕಿಗಾಹುತಿ; ಆತಂಕದಲ್ಲಿ ರೈತರು

25/01/2022, 08:58

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಪದೇ ಪದೇ ಬಣವಗಳಿಗೆ ಬೆಂಕಿ ಬೀಳುವುದರಿಂದ ರೈತರಲ್ಲಿ ಆತಂಕದ ಮನೆ ಮಾಡಿದೆ.

ಚಳ್ಳಕೆರೆ ತಾಲೂಕಿನ ತಳಕು ಹೋಬಳಿ ವ್ಯಾಪ್ತಿಯ ಮಲ್ಲಸಮುದ್ರ ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಮೂರು ರೈತರ ಬಣವೆಗಳಿಗೆ ಬೆಂಕಿ ಬಿದ್ದು ಭಸ್ಮವಾಗಿರುವುರಿಂದ ರೈತರಲ್ಲಿ ಆಂತಕ ಮೂಡಿದೆ. ಜ. 14 ರಂದು ರಾಜಪ್ಪನಿಗೆ ಸೇರಿದ 6 ಗಾಡಿ ಶೇಂಗಾ ಬಳ್ಳಿ ಬಣವೆಗೆ ಬೆಂಕಿ ಬಿದ್ದು ಸುಮಾರು 20 ಸಾವಿರ ನಷ್ಟವಾಗಿದೆ. ಜ. 15 ರಂದು ರಾಜಣ್ಣ ಇವರಿಗೆ ಸೇರಿದ 4 ಗಾಡಿ ಶೇಂಗಾ ಬಳ್ಳಿಗೆ ಬೆಂಕಿ ಬಿದ್ದುಸುಮಾರು 15 ಸಾವಿರ ರೂ ನಷ್ಟವಾಗಿದೆ. ಜ. 24 ರಂದು ಚನ್ನಬಸಪ್ಪ ಇವರಿಗೆ ಸೇರಿದ 11 ಎಕರೆಯಲ್ಲಿ ಬೆಳೆದ 8 ಟ್ರಾಕ್ಟ್ರರ್ ಶೇಂಗಾ ಬಳ್ಳಿಗೆ ಬೆಂಕಿ ಬಿದ್ದು ಸುಮಾರು 60 ಸಾವಿರು ರೂ ನಷ್ಟವಾಗಿದ್ದು ಒಂದೇ ತಿಂಗಳಲ್ಲಿ ಮೂರು ಜನರ ರೈತರ ಬಣವೆಗಳಿಗೆ ಬೆಂಕಿ ಬಿದ್ದು ಬಸ್ಮವಾಗಿದ್ದು ಜಾನುವಾರಿಗೆ ಮೇವಿನ ಕೊರತೆ ಎದುರಾಗಿದ್ದು ಇವುಗಳ ಪಾಲನೆ ಮಾಡುವುದು ಹೇಗೆ ಎಂಬ ಚಿಂತೆ ಒಂದು ಕಡೆಯಾಗಿದ್ದ ಗ್ರಾಮದಲ್ಲೂ ಸಹ ಬೆಂಕಿ ಅವಗಡಗಳಿಂದ ಆತಂಕ ಉಂಟಾಗಿದ್ದು ಕೂಡಲೆ ಸಂಬಂಧ ಪಟ್ಟ ಅಧಿಕಾರಿಗಳು ಹುಲ್ಲಿನ ಬಣವಗಳಿಗೆ ಬೆಂಕಿ ಹಚ್ಚುವ ಕಿಡಿಗೇಡಿಗಳನ್ನು ಪತ್ತೆ ಹಚ್ಚುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.


ಮೂರು ಪ್ರಕರಣಗಳನ್ನು ಅಗ್ನಿಶಾಮ ದಳದವರು ಬೆಂಕಿ ನಂದಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು