4:19 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಚಳ್ಳಕೆರೆ: ಸಂಭ್ರಮ- ಸಡಗರದಲ್ಲಿ ಗೌರಿ ಹಬ್ಬ ಆಚರಣೆ; 5 ದಿನಗಳ ಕಾಲ ಮೇಳೈಸಿದ ಜನಪದ ಗೀತೆ, ಕೋಲಾಟ, ಭಜನೆ

04/12/2023, 10:47

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲ್ಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಗೌರಿ ಹುಣ್ಣಿಮೆಯ ಅಂಗವಾಗಿ ಗೌರಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.
ಗ್ರಾಮದಲ್ಲಿ ಗೌರಿ ಹುಣ್ಣಿಮೆಯಂದು ಕೆರೆ ಮಣ್ಣನ್ನು ತಂದು ಆನೆಯ ಮೂರ್ತಿಯನ್ನು ಮಣ್ಣಿನಲ್ಲಿ ತಯಾರಿಸಿ, ಅದರ ಮೇಲೆ ಗೌರಿಯ ಮೂರ್ತಿಯನ್ನು ಪ್ರತಿಷ್ಠಾಪಿಸಿ, ವಿವಿಧ ಹೂಗಳಿಂದ ಅಲಂಕಾರ ಮಾಡಿ, ಐದು ದಿನಗಳ ಕಾಲ ಗ್ರಾಮದ ಹೆಣ್ಣು ಮಕ್ಕಳು ಸೀರೆಯನ್ನು ಹುಟ್ಟು ಅಲಂಕಾರಗೊಂಡು ಗೌರಮ್ಮನಿಗೆ ಆರತಿ ಹಿಡಿದು ವಿವಿಧ ರೀತಿಯ ಪೂಜೆಗಳನ್ನು ಸಲ್ಲಿಸುತ್ತಾರೆ.
ಗೌರಿಗೆ ಪ್ರತಿದಿನ ಹಳ್ಳಿಯ ಸೊಗಡಿನ ಜನಪದ ಗೀತೆ, ಕೋಲಾಟ, ಭಜನೆ ಕಾರ್ಯಕ್ರಮವನ್ನು ಪ್ರತಿದಿನ ಹಮ್ಮಿಕೊಂಡು ಗೌರಿ ಹಬ್ಬವನ್ನು ಆಚರಿಸುತ್ತಾರೆ.
ಗ್ರಾಮದಲ್ಲಿ ಗೌರಿ ಹಬ್ಬವನ್ನು 55 ವರ್ಷಗಳಿಂದ ಆಚರಿಸುತಿದ್ದೇವೆ, ನಮಗೆ ಸಮೃದ್ಧಿ ಮಳೆ ಆಗಲಿ ಮಳೆ ಆಗದೆ ಇರಲಿ ಯಾವ ವರ್ಷವೂ ಹಬ್ಬವನ್ನು ಕೈ ಬಿಡದೆ ಹಿಂದಿನಿಂದಲೂ ಆಚರಿಸಿಕೊಳ್ಳುತ್ತಾ ಬಂದಿದ್ದೇವೆ.
ಗೌರಿಯನ್ನು ವಿಸರ್ಜನೆ ಮಾಡುವ ಕೊನೆಯ ದಿನ, ಕೀಲು ಕುದುರೆ, ನಂದಿಕೋಲು, ಡೋಲು ಕುಣಿತ, ವೀರಗಾಸೆ, ನೃತ್ಯ ಪ್ರದರ್ಶನ ಹೀಗೆ ವಿವಿಧ ರೀತಿಯ ಕಲಾತಂಡಗಳನ್ನು ಪ್ರತಿ ವರ್ಷವೂ ಕರೆತಂದು ಗೌರಿಯನ್ನು ಹೂವಿನ ಪಲ್ಲಕ್ಕಿಯಲ್ಲಿ ಮೆರವಣಿಗೆ ಮಾಡುವ ಮೂಲಕ ವರ್ಷದಿಂದ ವರ್ಷ ಯಶಸ್ವಿಗೊಳಿಸಿಕೊಂಡು ಬಂದಿದ್ದೇವೆ ಎಂದು ಗ್ರಾಮಸ್ಥರು ಹೇಳುತ್ತಾರೆ

ಇತ್ತೀಚಿನ ಸುದ್ದಿ

ಜಾಹೀರಾತು