3:01 AM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಸಂಭ್ರಮ- ಸಡಗರದಲ್ಲಿ ಗೌರಿ ಹಬ್ಬ ಆಚರಣೆ; 5 ದಿನಗಳ ಕಾಲ ಮೇಳೈಸಿದ ಜನಪದ ಗೀತೆ, ಕೋಲಾಟ, ಭಜನೆ

04/12/2023, 10:47

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲ್ಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಗೌರಿ ಹುಣ್ಣಿಮೆಯ ಅಂಗವಾಗಿ ಗೌರಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.
ಗ್ರಾಮದಲ್ಲಿ ಗೌರಿ ಹುಣ್ಣಿಮೆಯಂದು ಕೆರೆ ಮಣ್ಣನ್ನು ತಂದು ಆನೆಯ ಮೂರ್ತಿಯನ್ನು ಮಣ್ಣಿನಲ್ಲಿ ತಯಾರಿಸಿ, ಅದರ ಮೇಲೆ ಗೌರಿಯ ಮೂರ್ತಿಯನ್ನು ಪ್ರತಿಷ್ಠಾಪಿಸಿ, ವಿವಿಧ ಹೂಗಳಿಂದ ಅಲಂಕಾರ ಮಾಡಿ, ಐದು ದಿನಗಳ ಕಾಲ ಗ್ರಾಮದ ಹೆಣ್ಣು ಮಕ್ಕಳು ಸೀರೆಯನ್ನು ಹುಟ್ಟು ಅಲಂಕಾರಗೊಂಡು ಗೌರಮ್ಮನಿಗೆ ಆರತಿ ಹಿಡಿದು ವಿವಿಧ ರೀತಿಯ ಪೂಜೆಗಳನ್ನು ಸಲ್ಲಿಸುತ್ತಾರೆ.
ಗೌರಿಗೆ ಪ್ರತಿದಿನ ಹಳ್ಳಿಯ ಸೊಗಡಿನ ಜನಪದ ಗೀತೆ, ಕೋಲಾಟ, ಭಜನೆ ಕಾರ್ಯಕ್ರಮವನ್ನು ಪ್ರತಿದಿನ ಹಮ್ಮಿಕೊಂಡು ಗೌರಿ ಹಬ್ಬವನ್ನು ಆಚರಿಸುತ್ತಾರೆ.
ಗ್ರಾಮದಲ್ಲಿ ಗೌರಿ ಹಬ್ಬವನ್ನು 55 ವರ್ಷಗಳಿಂದ ಆಚರಿಸುತಿದ್ದೇವೆ, ನಮಗೆ ಸಮೃದ್ಧಿ ಮಳೆ ಆಗಲಿ ಮಳೆ ಆಗದೆ ಇರಲಿ ಯಾವ ವರ್ಷವೂ ಹಬ್ಬವನ್ನು ಕೈ ಬಿಡದೆ ಹಿಂದಿನಿಂದಲೂ ಆಚರಿಸಿಕೊಳ್ಳುತ್ತಾ ಬಂದಿದ್ದೇವೆ.
ಗೌರಿಯನ್ನು ವಿಸರ್ಜನೆ ಮಾಡುವ ಕೊನೆಯ ದಿನ, ಕೀಲು ಕುದುರೆ, ನಂದಿಕೋಲು, ಡೋಲು ಕುಣಿತ, ವೀರಗಾಸೆ, ನೃತ್ಯ ಪ್ರದರ್ಶನ ಹೀಗೆ ವಿವಿಧ ರೀತಿಯ ಕಲಾತಂಡಗಳನ್ನು ಪ್ರತಿ ವರ್ಷವೂ ಕರೆತಂದು ಗೌರಿಯನ್ನು ಹೂವಿನ ಪಲ್ಲಕ್ಕಿಯಲ್ಲಿ ಮೆರವಣಿಗೆ ಮಾಡುವ ಮೂಲಕ ವರ್ಷದಿಂದ ವರ್ಷ ಯಶಸ್ವಿಗೊಳಿಸಿಕೊಂಡು ಬಂದಿದ್ದೇವೆ ಎಂದು ಗ್ರಾಮಸ್ಥರು ಹೇಳುತ್ತಾರೆ

ಇತ್ತೀಚಿನ ಸುದ್ದಿ

ಜಾಹೀರಾತು