1:01 PM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಸಂಭ್ರಮ- ಸಡಗರದಿಂದ ನಡೆದ ಹನುಮ ಜಯಂತಿ: ದೇವರಿಗೆ ಹಾಲು- ತುಪ್ಪದ ಅಭಿಷೇಕ

25/12/2023, 22:03

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಹನುಮ ಜಯಂತಿಯನ್ನು ಪ್ರತಿ ವರ್ಷದಂತೆ ಈ ವರ್ಷವೂ ಸಂಭ್ರಮ ಸಡಗರದಿಂದ ಗ್ರಾಮಸ್ಥರೆಲ್ಲರೂ ಆಚರಿಸಿದರು.
ಹನುಮನ ದೇವಸ್ಥಾನವನ್ನು ಮಾವಿನ-ತೋರಣ ವಿದ್ಯುತ್ ದೀಪಗಳು ಮತ್ತು ವಿವಿಧ ಬಗೆಯ ಹೂಗಳಿಂದ ದೇವಸ್ಥಾನವನ್ನು, ಅಲಂಕರಿಸಿ ದೇವರಿಗೆ, ಹಾಲು-ತುಪ್ಪದ ಅಭಿಷೇಕ, ವಿವಿಧ ಬಗೆಯ ಪೂಜಾ ಕಾರ್ಯಗಳನ್ನು ನಡೆಸಲಾಯಿತು. ಭಕ್ತರು ಹನುಮಾನ ದರ್ಶನ ಪಡೆಯಲು ಹೂವಿನ ಹಾರ, ಬಾಳೆಹಣ್ಣು, ತೆಂಗಿನಕಾಯಿ, ಕರ್ಪೂರ, ಪೂಜಾ ಸಾಮಗ್ರಿಗಳೊಂದಿಗೆ ಗ್ರಾಮದ ಸಮಸ್ತ ಭಕ್ತರು ದೇವಸ್ಥಾನಕ್ಕೆ ಬಂದು ದರ್ಶನವನ್ನು ಪಡೆದಿದ್ದಾರೆ, ಎಂದು ಪೂಜಾರಿ ರಂಗಸ್ವಾಮಿ ತಿಳಿಸಿದ್ದಾರೆ.

ಪ್ರತಿವರ್ಷದಂತೆ ಈ ವರ್ಷವೂ ಹನುಮ ಜಯಂತಿಯನ್ನು ತಾಲೂಕಿನಲ್ಲಿ ಬರಗಾಲವಿದ್ದರೂ ಸಹ ಗ್ರಾಮದ ಎಲ್ಲಾ ಜಾತಿ ಜನಾಂಗದ ಸಹಕಾರದಿಂದ ವಿಜೃಂಭಣೆಯಿಂದ ಆಚರಿಸಿದ್ದೇವೆ. ಅನ್ನ ಸಂತರ್ಪಣೆ ಮಾಡಲು ಒಂದು ಕ್ವಿಂಟಲ್ ಪುಳಿಯೋಗರೆ, ಅರ್ಧ ಕ್ವಿಂಟಲ್ ಪಾಯಸ,ಪಲ್ಯ ಎಲ್ಲವನ್ನು ಭಕ್ತರಿಗೆ ಮಾಡಿಸಿದ್ದು 2 ಸಾವಿರಕ್ಕೂ ಅಧಿಕ ಭಕ್ತಾದಿಗಳು ಪ್ರಸಾದ ಸ್ವೀಕರಿಸಿದ್ದಾರೆ. ಹಾಗೂ ಗ್ರಾಮದಲ್ಲಿ 12 ವರ್ಷಗಳಿಂದ ಹನುಮ ಜಯಂತಿ ಆಚರಿಸುತ್ತಾ ಬಂದಿದ್ದೇವೆ. ದೇವಸ್ಥಾನ ಇನ್ನು ಅಭಿವೃದ್ಧಿ ಹೊಂದಬೇಕಿದೆ. ಇದರಿಂದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಶಾಸಕರಾದ ಟಿ. ರಘುಮೂರ್ತಿ ಅವರು ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನವನ್ನು ತನ್ನ ಅನುದಾನದಲ್ಲಿ ಪೂರ್ಣಗೊಳಿಸಿ ಕೊಡುತ್ತಾರೆ ಎಂಬ ಭರವಸೆ ನೀಡಿದ್ದರು. ಇದರಿಂದ ಗ್ರಾಮಸ್ಥರು ಸಾವಿರಕ್ಕೂ ಹೆಚ್ಚು ಮತಗಳನ್ನು ನೀಡಿ ಜಯಶೀಲರನ್ನಾಗಿಸಿದ್ದೇವೆ. ಶಾಸಕರು ದೇವಸ್ಥಾನವನ್ನು ಪೂರ್ಣಗೊಳಿಸಿ ಕೊಡುವ ನಂಬಿಕೆ ಗ್ರಾಮಸ್ಥರಿಗೆ ಇದೆ ಎಂದು ಗ್ರಾಮ ಪಂಚಾಯತಿ ಸದಸ್ಯ ಪಿ.ಟಿ.ಎಸ್. ನಾಗರಾಜ್ ಅವರು ಮಾಧ್ಯಮದವರಿಗೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು