7:30 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಚಳ್ಳಕೆರೆ: ಸಂಭ್ರಮ- ಸಡಗರದಿಂದ ನಡೆದ ಹನುಮ ಜಯಂತಿ: ದೇವರಿಗೆ ಹಾಲು- ತುಪ್ಪದ ಅಭಿಷೇಕ

25/12/2023, 22:03

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಹನುಮ ಜಯಂತಿಯನ್ನು ಪ್ರತಿ ವರ್ಷದಂತೆ ಈ ವರ್ಷವೂ ಸಂಭ್ರಮ ಸಡಗರದಿಂದ ಗ್ರಾಮಸ್ಥರೆಲ್ಲರೂ ಆಚರಿಸಿದರು.
ಹನುಮನ ದೇವಸ್ಥಾನವನ್ನು ಮಾವಿನ-ತೋರಣ ವಿದ್ಯುತ್ ದೀಪಗಳು ಮತ್ತು ವಿವಿಧ ಬಗೆಯ ಹೂಗಳಿಂದ ದೇವಸ್ಥಾನವನ್ನು, ಅಲಂಕರಿಸಿ ದೇವರಿಗೆ, ಹಾಲು-ತುಪ್ಪದ ಅಭಿಷೇಕ, ವಿವಿಧ ಬಗೆಯ ಪೂಜಾ ಕಾರ್ಯಗಳನ್ನು ನಡೆಸಲಾಯಿತು. ಭಕ್ತರು ಹನುಮಾನ ದರ್ಶನ ಪಡೆಯಲು ಹೂವಿನ ಹಾರ, ಬಾಳೆಹಣ್ಣು, ತೆಂಗಿನಕಾಯಿ, ಕರ್ಪೂರ, ಪೂಜಾ ಸಾಮಗ್ರಿಗಳೊಂದಿಗೆ ಗ್ರಾಮದ ಸಮಸ್ತ ಭಕ್ತರು ದೇವಸ್ಥಾನಕ್ಕೆ ಬಂದು ದರ್ಶನವನ್ನು ಪಡೆದಿದ್ದಾರೆ, ಎಂದು ಪೂಜಾರಿ ರಂಗಸ್ವಾಮಿ ತಿಳಿಸಿದ್ದಾರೆ.

ಪ್ರತಿವರ್ಷದಂತೆ ಈ ವರ್ಷವೂ ಹನುಮ ಜಯಂತಿಯನ್ನು ತಾಲೂಕಿನಲ್ಲಿ ಬರಗಾಲವಿದ್ದರೂ ಸಹ ಗ್ರಾಮದ ಎಲ್ಲಾ ಜಾತಿ ಜನಾಂಗದ ಸಹಕಾರದಿಂದ ವಿಜೃಂಭಣೆಯಿಂದ ಆಚರಿಸಿದ್ದೇವೆ. ಅನ್ನ ಸಂತರ್ಪಣೆ ಮಾಡಲು ಒಂದು ಕ್ವಿಂಟಲ್ ಪುಳಿಯೋಗರೆ, ಅರ್ಧ ಕ್ವಿಂಟಲ್ ಪಾಯಸ,ಪಲ್ಯ ಎಲ್ಲವನ್ನು ಭಕ್ತರಿಗೆ ಮಾಡಿಸಿದ್ದು 2 ಸಾವಿರಕ್ಕೂ ಅಧಿಕ ಭಕ್ತಾದಿಗಳು ಪ್ರಸಾದ ಸ್ವೀಕರಿಸಿದ್ದಾರೆ. ಹಾಗೂ ಗ್ರಾಮದಲ್ಲಿ 12 ವರ್ಷಗಳಿಂದ ಹನುಮ ಜಯಂತಿ ಆಚರಿಸುತ್ತಾ ಬಂದಿದ್ದೇವೆ. ದೇವಸ್ಥಾನ ಇನ್ನು ಅಭಿವೃದ್ಧಿ ಹೊಂದಬೇಕಿದೆ. ಇದರಿಂದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಶಾಸಕರಾದ ಟಿ. ರಘುಮೂರ್ತಿ ಅವರು ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನವನ್ನು ತನ್ನ ಅನುದಾನದಲ್ಲಿ ಪೂರ್ಣಗೊಳಿಸಿ ಕೊಡುತ್ತಾರೆ ಎಂಬ ಭರವಸೆ ನೀಡಿದ್ದರು. ಇದರಿಂದ ಗ್ರಾಮಸ್ಥರು ಸಾವಿರಕ್ಕೂ ಹೆಚ್ಚು ಮತಗಳನ್ನು ನೀಡಿ ಜಯಶೀಲರನ್ನಾಗಿಸಿದ್ದೇವೆ. ಶಾಸಕರು ದೇವಸ್ಥಾನವನ್ನು ಪೂರ್ಣಗೊಳಿಸಿ ಕೊಡುವ ನಂಬಿಕೆ ಗ್ರಾಮಸ್ಥರಿಗೆ ಇದೆ ಎಂದು ಗ್ರಾಮ ಪಂಚಾಯತಿ ಸದಸ್ಯ ಪಿ.ಟಿ.ಎಸ್. ನಾಗರಾಜ್ ಅವರು ಮಾಧ್ಯಮದವರಿಗೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು