1:29 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಚಳ್ಳಕೆರೆ: ಸಂಭ್ರಮ- ಸಡಗರದಿಂದ ನಡೆದ ಹನುಮ ಜಯಂತಿ: ದೇವರಿಗೆ ಹಾಲು- ತುಪ್ಪದ ಅಭಿಷೇಕ

25/12/2023, 22:03

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಹನುಮ ಜಯಂತಿಯನ್ನು ಪ್ರತಿ ವರ್ಷದಂತೆ ಈ ವರ್ಷವೂ ಸಂಭ್ರಮ ಸಡಗರದಿಂದ ಗ್ರಾಮಸ್ಥರೆಲ್ಲರೂ ಆಚರಿಸಿದರು.
ಹನುಮನ ದೇವಸ್ಥಾನವನ್ನು ಮಾವಿನ-ತೋರಣ ವಿದ್ಯುತ್ ದೀಪಗಳು ಮತ್ತು ವಿವಿಧ ಬಗೆಯ ಹೂಗಳಿಂದ ದೇವಸ್ಥಾನವನ್ನು, ಅಲಂಕರಿಸಿ ದೇವರಿಗೆ, ಹಾಲು-ತುಪ್ಪದ ಅಭಿಷೇಕ, ವಿವಿಧ ಬಗೆಯ ಪೂಜಾ ಕಾರ್ಯಗಳನ್ನು ನಡೆಸಲಾಯಿತು. ಭಕ್ತರು ಹನುಮಾನ ದರ್ಶನ ಪಡೆಯಲು ಹೂವಿನ ಹಾರ, ಬಾಳೆಹಣ್ಣು, ತೆಂಗಿನಕಾಯಿ, ಕರ್ಪೂರ, ಪೂಜಾ ಸಾಮಗ್ರಿಗಳೊಂದಿಗೆ ಗ್ರಾಮದ ಸಮಸ್ತ ಭಕ್ತರು ದೇವಸ್ಥಾನಕ್ಕೆ ಬಂದು ದರ್ಶನವನ್ನು ಪಡೆದಿದ್ದಾರೆ, ಎಂದು ಪೂಜಾರಿ ರಂಗಸ್ವಾಮಿ ತಿಳಿಸಿದ್ದಾರೆ.

ಪ್ರತಿವರ್ಷದಂತೆ ಈ ವರ್ಷವೂ ಹನುಮ ಜಯಂತಿಯನ್ನು ತಾಲೂಕಿನಲ್ಲಿ ಬರಗಾಲವಿದ್ದರೂ ಸಹ ಗ್ರಾಮದ ಎಲ್ಲಾ ಜಾತಿ ಜನಾಂಗದ ಸಹಕಾರದಿಂದ ವಿಜೃಂಭಣೆಯಿಂದ ಆಚರಿಸಿದ್ದೇವೆ. ಅನ್ನ ಸಂತರ್ಪಣೆ ಮಾಡಲು ಒಂದು ಕ್ವಿಂಟಲ್ ಪುಳಿಯೋಗರೆ, ಅರ್ಧ ಕ್ವಿಂಟಲ್ ಪಾಯಸ,ಪಲ್ಯ ಎಲ್ಲವನ್ನು ಭಕ್ತರಿಗೆ ಮಾಡಿಸಿದ್ದು 2 ಸಾವಿರಕ್ಕೂ ಅಧಿಕ ಭಕ್ತಾದಿಗಳು ಪ್ರಸಾದ ಸ್ವೀಕರಿಸಿದ್ದಾರೆ. ಹಾಗೂ ಗ್ರಾಮದಲ್ಲಿ 12 ವರ್ಷಗಳಿಂದ ಹನುಮ ಜಯಂತಿ ಆಚರಿಸುತ್ತಾ ಬಂದಿದ್ದೇವೆ. ದೇವಸ್ಥಾನ ಇನ್ನು ಅಭಿವೃದ್ಧಿ ಹೊಂದಬೇಕಿದೆ. ಇದರಿಂದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಶಾಸಕರಾದ ಟಿ. ರಘುಮೂರ್ತಿ ಅವರು ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನವನ್ನು ತನ್ನ ಅನುದಾನದಲ್ಲಿ ಪೂರ್ಣಗೊಳಿಸಿ ಕೊಡುತ್ತಾರೆ ಎಂಬ ಭರವಸೆ ನೀಡಿದ್ದರು. ಇದರಿಂದ ಗ್ರಾಮಸ್ಥರು ಸಾವಿರಕ್ಕೂ ಹೆಚ್ಚು ಮತಗಳನ್ನು ನೀಡಿ ಜಯಶೀಲರನ್ನಾಗಿಸಿದ್ದೇವೆ. ಶಾಸಕರು ದೇವಸ್ಥಾನವನ್ನು ಪೂರ್ಣಗೊಳಿಸಿ ಕೊಡುವ ನಂಬಿಕೆ ಗ್ರಾಮಸ್ಥರಿಗೆ ಇದೆ ಎಂದು ಗ್ರಾಮ ಪಂಚಾಯತಿ ಸದಸ್ಯ ಪಿ.ಟಿ.ಎಸ್. ನಾಗರಾಜ್ ಅವರು ಮಾಧ್ಯಮದವರಿಗೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು