4:49 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಎಸ್ಸೆಸ್ಸೆಲ್ಸಿ ವಿಜ್ಞಾನ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನಕಲು ಹೊಡೆಯಲು ಸಹಕಾರ: 4 ಮಂದಿ ಶಿಕ್ಷಕರ ಅಮಾನತು

30/03/2024, 21:09

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

2023-24ನೇ ಸಾಲಿನ ಎಸ್​​ಎಸ್​​ಎಲ್​ಸಿ ವಾರ್ಷಿಕ ಪರೀಕ್ಷೆ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿದ ನಾಲ್ವರು ಶಿಕ್ಷಕರನ್ನು ಅಮಾನತು ಮಾಡಿ ಡಿಡಿಪಿಐ ಕೆ.ರವಿಶಂಕರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಚಳ್ಳಕೆರೆ ತಾಲೂಕಿನ ಮಂಜರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ರೇವಣ್ಣ, ಗೋಸಿಕೆರೆಯ ರಾಧಾಕೃಷ್ಣ ಗ್ರಾಮಾಂತರ ಪ್ರೌಢಶಾಲೆಯ ಸಹ ಶಿಕ್ಷಕ ರಾಘವೇಂದ್ರ, ಪಿ.ಓಬನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಚಂದ್ರಶೇಖರ ಹಾಗೂ ಕೊರ್ಲಕುಂಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಪ್ರಕಾಶ್ ಅವರು ಅಮಾನತುಗೊಂಡಿದ್ದಾರೆ. ಶನಿವಾರ ಪರುಶುರಾಮಪುರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿಜ್ಞಾನ ವಿಷಯದ ಪರೀಕ್ಷೆ ನಡೆಯುತ್ತಿದ್ದು, ಇವರೆಲ್ಲರೂ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದರು. ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ವಿಧ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸುತ್ತಿರುವುದು ಕಂಡು ಬಂದಿದೆ. ನಕಲು ಮಾಡುವುದನ್ನು ತಡೆಯದೇ ಪರೀಕ್ಷಾ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷತೆ, ಬೇಜವಾಬ್ದಾರಿತನ ಮತ್ತು ಕರ್ತವ್ಯ ಲೋಪ ಎಸಗಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಸಹ ಶಿಕ್ಷಕರನ್ನು ಅಮಾನತು ಮಾಡಲಾಗಿದೆ ಎಂದು ಡಿಡಿಪಿಐ ರವಿಶಂಕರ್ ರೆಡ್ಡಿ ಆದೇಶದಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು