3:57 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಚಳ್ಳಕೆರೆ ತಾಲೂಕು ಕುಡಿಯುವ ನೀರಿನ ಸಮಸ್ಯೆ: 40 ಗ್ರಾಪಂ ಪಿಡಿಒಗಳ ತುರ್ತು ಸಭೆ; 21 ರೀಬೋರ್ ಮಾಡಿಸಲು ಸೂಚನೆ

27/03/2024, 22:37

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಕುಡಿಯುವ ನೀರು ನಿರ್ವಹಣೆ ಕುರಿತಾದ ತುರ್ತು ಸಭೆ ಚಳ್ಳಕೆರೆ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು.

ಬೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು-ನೈರ್ಮಲ್ಯ ಇಲಾಖೆ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ತಾಲ್ಲೂಕಿನ 40 ಗ್ರಾಪಂಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿದ್ದರು. ಒಟ್ಟು 7 ಗ್ರಾಮಗಳಲ್ಲಿ ಖಾಸಗಿ ಜಮೀನಿನಿಂದ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆದು ನೀರನ್ನು ಪೂರೈಸಲಾಗುತ್ತಿದೆ. ವಿವಿಧ ಗ್ರಾಮಗಳಲ್ಲಿ ಒಟ್ಟು 6500 ಮೀಟರ್ ಹೊಸ ಪೈಪ್ ಲೈನ್ ನಿರ್ಮಿಸುವ ಅಗತ್ಯವಿದೆಯೆಂದು ಪಂ.ಅ.ಅಧಿಕಾರಿಗಳು ಮಾಹಿತಿ ನೀಡಿದರು.
ಒಟ್ಟು 21 ರೀಬೋರ್ ಮಾಡಿಸುವ ಅಗತ್ಯವಿದೆಯೆಂದು ಪಂ.ಅ.ಅಧಿಕಾರಿಗಳು ಮಾಹಿತಿ ನೀಡಿದಾಗ, ಸದರಿ ಬೋರ್ ವೆಲ್ ಗಳನ್ನು ರೀ ಬೋರ್ ಮಾಡುವಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು-ನೈರ್ಮಲ್ಯ ಇಲಾಖೆರವರಿಗೆ ಸೂಚಿಸಲಾಯಿತು.
ಕೂಲಿಕಾರರು ಕೆಲಸಕ್ಕಾಗಿ ಬೇಡಿಕೆ ಸಲ್ಲಿಸಿದಲ್ಲಿ ತಕ್ಷಣ ಕೆಲಸ ನೀಡಬೇಕೆಂದು ಪಂ.ಅ.ಅಧಿಕಾರಿಗಳಿಗೆ ಸೂಚಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು