5:07 AM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಚಳ್ಳಕೆರೆ ತಾಲೂಕು ಕುಡಿಯುವ ನೀರಿನ ಸಮಸ್ಯೆ: 40 ಗ್ರಾಪಂ ಪಿಡಿಒಗಳ ತುರ್ತು ಸಭೆ; 21 ರೀಬೋರ್ ಮಾಡಿಸಲು ಸೂಚನೆ

27/03/2024, 22:37

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಕುಡಿಯುವ ನೀರು ನಿರ್ವಹಣೆ ಕುರಿತಾದ ತುರ್ತು ಸಭೆ ಚಳ್ಳಕೆರೆ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು.

ಬೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು-ನೈರ್ಮಲ್ಯ ಇಲಾಖೆ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ತಾಲ್ಲೂಕಿನ 40 ಗ್ರಾಪಂಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿದ್ದರು. ಒಟ್ಟು 7 ಗ್ರಾಮಗಳಲ್ಲಿ ಖಾಸಗಿ ಜಮೀನಿನಿಂದ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆದು ನೀರನ್ನು ಪೂರೈಸಲಾಗುತ್ತಿದೆ. ವಿವಿಧ ಗ್ರಾಮಗಳಲ್ಲಿ ಒಟ್ಟು 6500 ಮೀಟರ್ ಹೊಸ ಪೈಪ್ ಲೈನ್ ನಿರ್ಮಿಸುವ ಅಗತ್ಯವಿದೆಯೆಂದು ಪಂ.ಅ.ಅಧಿಕಾರಿಗಳು ಮಾಹಿತಿ ನೀಡಿದರು.
ಒಟ್ಟು 21 ರೀಬೋರ್ ಮಾಡಿಸುವ ಅಗತ್ಯವಿದೆಯೆಂದು ಪಂ.ಅ.ಅಧಿಕಾರಿಗಳು ಮಾಹಿತಿ ನೀಡಿದಾಗ, ಸದರಿ ಬೋರ್ ವೆಲ್ ಗಳನ್ನು ರೀ ಬೋರ್ ಮಾಡುವಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು-ನೈರ್ಮಲ್ಯ ಇಲಾಖೆರವರಿಗೆ ಸೂಚಿಸಲಾಯಿತು.
ಕೂಲಿಕಾರರು ಕೆಲಸಕ್ಕಾಗಿ ಬೇಡಿಕೆ ಸಲ್ಲಿಸಿದಲ್ಲಿ ತಕ್ಷಣ ಕೆಲಸ ನೀಡಬೇಕೆಂದು ಪಂ.ಅ.ಅಧಿಕಾರಿಗಳಿಗೆ ಸೂಚಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು