10:43 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು

26/04/2024, 21:56

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ ನಡೆದಿದ್ದು, ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ.
ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಯಶೋಧಮ್ಮ ಅವರು ಲೋ ಬಿಪಿಯಿಂದ ಮೃತಪಟ್ಟಿದ್ದಾರೆ. 55ರ ಹರೆಯದ ಯಶೋಧಮ್ಮ ಅವರು ಚಳ್ಳಕೆರೆ ಪಟ್ಟಣದ ವಿಠಲ ನಗರದ ನಿವಾಸಿ.
ಯಶೋದಮ್ಮ ಅವರು ಲೋ ಬಿಪಿಯಿಂದಾಗಿ ಅಸ್ವಸ್ಥಗೊಂಡಿದ್ದ ಅವರನ್ನು ಕೂಡಲೆ ಚಳ್ಳಕೆರೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ದಾರಿ ಮಧ್ಯದಲ್ಲೇ ಅವರು ಮೃತಪಟ್ಟರು. ಚಳ್ಳಕೆರೆ ಆಸ್ಪತ್ರೆಗೆ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು