4:31 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಚಳ್ಳಕೆರೆ ಗೊಲ್ಲರಹಟ್ಟಿಯಲ್ಲಿ 1 ವರ್ಷದಿಂದ ಸ್ಥಗಿತಗೊಂಡಿದ್ದ ಶುದ್ಧ ಕುಡಿಯುವ ನೀರಿನ ಘಟಕ ಮತ್ತೆ ಆರಂಭ

09/01/2025, 17:25

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka.com

ಚಳ್ಳಕೆರೆ ತಾಲೂಕಿನ ಎಲಗಟ್ಟೆ ಗೊಲ್ಲರಹಟ್ಟಿ ಗ್ರಾಮದ ಊರಿನಲ್ಲಿ ಕಳೆದ ಒಂದು ವರ್ಷದಿಂದ ನಿಂತು ಹೋಗಿದ್ದ ಶುದ್ಧ ಕುಡಿಯುವ ನೀರಿನ ಘಟಕ ಮತ್ತೆ ಆರಂಭಗೊಂಡಿದೆ‌.
ಕರ್ನಾಟಕ ಯವರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷ ಸುನಿಲ್ ಅವರ ಪರಿಶ್ರಮದ ಫಲವಾಗಿ ಘಟಕ ಕಾರ್ಯಾರಂಭ ಮಾಡಿದೆ.
ನಿಂತು ಹೋಗಿದ್ದು ಘಟಕದ ಕುರಿತು ಸ್ಥಳೀಯ ಯುವಕರು ಅನೇಕ ಬಾರಿ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಪಿಡಿಒಗಳಿಗೆ ಮನವಿ ಮಾಡಿದ್ದರು. ಆದರೆ ಅವರು ಸ್ಪಂದಿಸದ ಕಾರಣ ಕರ್ನಾಟಕ ಯವರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷರಾದ ಸುನಿಲ್ ಸರ್ ಅವರ ನೇತೃತ್ವದಲ್ಲಿ ಹಾಗೂ ಚಳ್ಳಕೆರೆ ಕರ್ನಾಟಕ ರಕ್ಷಣಾ ವೇದಿಕೆಯ ಸಂಘಟನಾ ಮುಖ್ಯಸ್ಥರಿಂದ ತಾಲೂಕು ಪಂಚಾಯತಿ ಮುಖ್ಯಸ್ಥರಾದ ಶಶಿಧರ ಅವರಿಗೆ ಕುಡಿಯುವ ನೀರಿನ ಶುದ್ಧ ಘಟಕವನ್ನು ಆದಷ್ಟು ಬೇಗ ಮರು ಸ್ಥಾಪನೆ ಆಗಬೇಕು. ಗ್ರಾಮದಲ್ಲಿ ನೆಗಡಿ ಶೀತ ಕೆಮ್ಮು ಹೆಚ್ಚಾಗಿದ್ದು ಶುದ್ಧ ನೀರಿನ ಘಟಕ ಮತ್ತೆ ಚಾಲ್ತಿಯಾಗಬೇಕೆಂದು ಮನವಿ ಸಲ್ಲಿಸಲಾಯಿತು. ಈ ಮನವಿಗೆ ಸ್ಪಂದಿಸಿದ ತಾಲೂಕು ಪಂಚಾಯತಿ ಮುಖ್ಯಸ್ಥರು ತ್ವರಿತವಾಗಿ ಇಂದು ಶುದ್ಧ ನೀರಿನ ಘಟಕಕ್ಕೆ ಹೊಸ ಉತ್ಪನ್ನಗಳ ಅಳವಡಿಸಿ ಮರುಸ್ಥಾಪನೆ ಮಾಡುವಲ್ಲಿ ಸಫಲರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು