9:13 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಚಳ್ಳಕೆರೆ ಗೊಲ್ಲರಹಟ್ಟಿಯಲ್ಲಿ 1 ವರ್ಷದಿಂದ ಸ್ಥಗಿತಗೊಂಡಿದ್ದ ಶುದ್ಧ ಕುಡಿಯುವ ನೀರಿನ ಘಟಕ ಮತ್ತೆ ಆರಂಭ

09/01/2025, 17:25

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka.com

ಚಳ್ಳಕೆರೆ ತಾಲೂಕಿನ ಎಲಗಟ್ಟೆ ಗೊಲ್ಲರಹಟ್ಟಿ ಗ್ರಾಮದ ಊರಿನಲ್ಲಿ ಕಳೆದ ಒಂದು ವರ್ಷದಿಂದ ನಿಂತು ಹೋಗಿದ್ದ ಶುದ್ಧ ಕುಡಿಯುವ ನೀರಿನ ಘಟಕ ಮತ್ತೆ ಆರಂಭಗೊಂಡಿದೆ‌.
ಕರ್ನಾಟಕ ಯವರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷ ಸುನಿಲ್ ಅವರ ಪರಿಶ್ರಮದ ಫಲವಾಗಿ ಘಟಕ ಕಾರ್ಯಾರಂಭ ಮಾಡಿದೆ.
ನಿಂತು ಹೋಗಿದ್ದು ಘಟಕದ ಕುರಿತು ಸ್ಥಳೀಯ ಯುವಕರು ಅನೇಕ ಬಾರಿ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಪಿಡಿಒಗಳಿಗೆ ಮನವಿ ಮಾಡಿದ್ದರು. ಆದರೆ ಅವರು ಸ್ಪಂದಿಸದ ಕಾರಣ ಕರ್ನಾಟಕ ಯವರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷರಾದ ಸುನಿಲ್ ಸರ್ ಅವರ ನೇತೃತ್ವದಲ್ಲಿ ಹಾಗೂ ಚಳ್ಳಕೆರೆ ಕರ್ನಾಟಕ ರಕ್ಷಣಾ ವೇದಿಕೆಯ ಸಂಘಟನಾ ಮುಖ್ಯಸ್ಥರಿಂದ ತಾಲೂಕು ಪಂಚಾಯತಿ ಮುಖ್ಯಸ್ಥರಾದ ಶಶಿಧರ ಅವರಿಗೆ ಕುಡಿಯುವ ನೀರಿನ ಶುದ್ಧ ಘಟಕವನ್ನು ಆದಷ್ಟು ಬೇಗ ಮರು ಸ್ಥಾಪನೆ ಆಗಬೇಕು. ಗ್ರಾಮದಲ್ಲಿ ನೆಗಡಿ ಶೀತ ಕೆಮ್ಮು ಹೆಚ್ಚಾಗಿದ್ದು ಶುದ್ಧ ನೀರಿನ ಘಟಕ ಮತ್ತೆ ಚಾಲ್ತಿಯಾಗಬೇಕೆಂದು ಮನವಿ ಸಲ್ಲಿಸಲಾಯಿತು. ಈ ಮನವಿಗೆ ಸ್ಪಂದಿಸಿದ ತಾಲೂಕು ಪಂಚಾಯತಿ ಮುಖ್ಯಸ್ಥರು ತ್ವರಿತವಾಗಿ ಇಂದು ಶುದ್ಧ ನೀರಿನ ಘಟಕಕ್ಕೆ ಹೊಸ ಉತ್ಪನ್ನಗಳ ಅಳವಡಿಸಿ ಮರುಸ್ಥಾಪನೆ ಮಾಡುವಲ್ಲಿ ಸಫಲರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು