2:04 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಚಳ್ಳಕೆರೆ ಗೊಲ್ಲರಹಟ್ಟಿಯಲ್ಲಿ 1 ವರ್ಷದಿಂದ ಸ್ಥಗಿತಗೊಂಡಿದ್ದ ಶುದ್ಧ ಕುಡಿಯುವ ನೀರಿನ ಘಟಕ ಮತ್ತೆ ಆರಂಭ

09/01/2025, 17:25

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka.com

ಚಳ್ಳಕೆರೆ ತಾಲೂಕಿನ ಎಲಗಟ್ಟೆ ಗೊಲ್ಲರಹಟ್ಟಿ ಗ್ರಾಮದ ಊರಿನಲ್ಲಿ ಕಳೆದ ಒಂದು ವರ್ಷದಿಂದ ನಿಂತು ಹೋಗಿದ್ದ ಶುದ್ಧ ಕುಡಿಯುವ ನೀರಿನ ಘಟಕ ಮತ್ತೆ ಆರಂಭಗೊಂಡಿದೆ‌.
ಕರ್ನಾಟಕ ಯವರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷ ಸುನಿಲ್ ಅವರ ಪರಿಶ್ರಮದ ಫಲವಾಗಿ ಘಟಕ ಕಾರ್ಯಾರಂಭ ಮಾಡಿದೆ.
ನಿಂತು ಹೋಗಿದ್ದು ಘಟಕದ ಕುರಿತು ಸ್ಥಳೀಯ ಯುವಕರು ಅನೇಕ ಬಾರಿ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಪಿಡಿಒಗಳಿಗೆ ಮನವಿ ಮಾಡಿದ್ದರು. ಆದರೆ ಅವರು ಸ್ಪಂದಿಸದ ಕಾರಣ ಕರ್ನಾಟಕ ಯವರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷರಾದ ಸುನಿಲ್ ಸರ್ ಅವರ ನೇತೃತ್ವದಲ್ಲಿ ಹಾಗೂ ಚಳ್ಳಕೆರೆ ಕರ್ನಾಟಕ ರಕ್ಷಣಾ ವೇದಿಕೆಯ ಸಂಘಟನಾ ಮುಖ್ಯಸ್ಥರಿಂದ ತಾಲೂಕು ಪಂಚಾಯತಿ ಮುಖ್ಯಸ್ಥರಾದ ಶಶಿಧರ ಅವರಿಗೆ ಕುಡಿಯುವ ನೀರಿನ ಶುದ್ಧ ಘಟಕವನ್ನು ಆದಷ್ಟು ಬೇಗ ಮರು ಸ್ಥಾಪನೆ ಆಗಬೇಕು. ಗ್ರಾಮದಲ್ಲಿ ನೆಗಡಿ ಶೀತ ಕೆಮ್ಮು ಹೆಚ್ಚಾಗಿದ್ದು ಶುದ್ಧ ನೀರಿನ ಘಟಕ ಮತ್ತೆ ಚಾಲ್ತಿಯಾಗಬೇಕೆಂದು ಮನವಿ ಸಲ್ಲಿಸಲಾಯಿತು. ಈ ಮನವಿಗೆ ಸ್ಪಂದಿಸಿದ ತಾಲೂಕು ಪಂಚಾಯತಿ ಮುಖ್ಯಸ್ಥರು ತ್ವರಿತವಾಗಿ ಇಂದು ಶುದ್ಧ ನೀರಿನ ಘಟಕಕ್ಕೆ ಹೊಸ ಉತ್ಪನ್ನಗಳ ಅಳವಡಿಸಿ ಮರುಸ್ಥಾಪನೆ ಮಾಡುವಲ್ಲಿ ಸಫಲರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು