12:41 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು…

ಇತ್ತೀಚಿನ ಸುದ್ದಿ

ಚಳ್ಳಕೆರೆ ಗೊಲ್ಲರಹಟ್ಟಿಯಲ್ಲಿ 1 ವರ್ಷದಿಂದ ಸ್ಥಗಿತಗೊಂಡಿದ್ದ ಶುದ್ಧ ಕುಡಿಯುವ ನೀರಿನ ಘಟಕ ಮತ್ತೆ ಆರಂಭ

09/01/2025, 17:25

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka.com

ಚಳ್ಳಕೆರೆ ತಾಲೂಕಿನ ಎಲಗಟ್ಟೆ ಗೊಲ್ಲರಹಟ್ಟಿ ಗ್ರಾಮದ ಊರಿನಲ್ಲಿ ಕಳೆದ ಒಂದು ವರ್ಷದಿಂದ ನಿಂತು ಹೋಗಿದ್ದ ಶುದ್ಧ ಕುಡಿಯುವ ನೀರಿನ ಘಟಕ ಮತ್ತೆ ಆರಂಭಗೊಂಡಿದೆ‌.
ಕರ್ನಾಟಕ ಯವರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷ ಸುನಿಲ್ ಅವರ ಪರಿಶ್ರಮದ ಫಲವಾಗಿ ಘಟಕ ಕಾರ್ಯಾರಂಭ ಮಾಡಿದೆ.
ನಿಂತು ಹೋಗಿದ್ದು ಘಟಕದ ಕುರಿತು ಸ್ಥಳೀಯ ಯುವಕರು ಅನೇಕ ಬಾರಿ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಪಿಡಿಒಗಳಿಗೆ ಮನವಿ ಮಾಡಿದ್ದರು. ಆದರೆ ಅವರು ಸ್ಪಂದಿಸದ ಕಾರಣ ಕರ್ನಾಟಕ ಯವರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷರಾದ ಸುನಿಲ್ ಸರ್ ಅವರ ನೇತೃತ್ವದಲ್ಲಿ ಹಾಗೂ ಚಳ್ಳಕೆರೆ ಕರ್ನಾಟಕ ರಕ್ಷಣಾ ವೇದಿಕೆಯ ಸಂಘಟನಾ ಮುಖ್ಯಸ್ಥರಿಂದ ತಾಲೂಕು ಪಂಚಾಯತಿ ಮುಖ್ಯಸ್ಥರಾದ ಶಶಿಧರ ಅವರಿಗೆ ಕುಡಿಯುವ ನೀರಿನ ಶುದ್ಧ ಘಟಕವನ್ನು ಆದಷ್ಟು ಬೇಗ ಮರು ಸ್ಥಾಪನೆ ಆಗಬೇಕು. ಗ್ರಾಮದಲ್ಲಿ ನೆಗಡಿ ಶೀತ ಕೆಮ್ಮು ಹೆಚ್ಚಾಗಿದ್ದು ಶುದ್ಧ ನೀರಿನ ಘಟಕ ಮತ್ತೆ ಚಾಲ್ತಿಯಾಗಬೇಕೆಂದು ಮನವಿ ಸಲ್ಲಿಸಲಾಯಿತು. ಈ ಮನವಿಗೆ ಸ್ಪಂದಿಸಿದ ತಾಲೂಕು ಪಂಚಾಯತಿ ಮುಖ್ಯಸ್ಥರು ತ್ವರಿತವಾಗಿ ಇಂದು ಶುದ್ಧ ನೀರಿನ ಘಟಕಕ್ಕೆ ಹೊಸ ಉತ್ಪನ್ನಗಳ ಅಳವಡಿಸಿ ಮರುಸ್ಥಾಪನೆ ಮಾಡುವಲ್ಲಿ ಸಫಲರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು