4:48 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

Chalukya Festival | ಕೋನಾರ್ಕ್ ಉತ್ಸವದ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಣೆಗೆ ರಾಜ್ಯ ಸರಕಾರ ತೀರ್ಮಾನ

18/03/2025, 22:35

ಬೆಂಗಳೂರು(reporterjarnataka.com): ಒಡಿಶಾ ರಾಜ್ಯದ ಪ್ರಸಿದ್ಧ ಕೋನಾರ್ಕ್ ಉತ್ಸವದ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ‌ ಕೈಗೊಳ್ಳಲಾಗಿದೆ.
ಚಾಲುಕ್ಯ ಉತ್ಸವ ಆಚರಣೆ ಹಿನ್ನೆಲೆಯಲ್ಲಿ ಸಚಿವ ಶಿವರಾಜ್ ಎಸ್.ತಂಗಡಗಿ ಅವರ ನೇತೃತ್ವದಲ್ಲಿ ಬಾಗಲಕೋಟೆಯ ಜನಪ್ರತಿನಿಧಿಗಳ ಸಭೆ ಮಂಗಳವಾರ ವಿಕಾಸಸೌಧದಲ್ಲಿ ನಡೆಯಿತು.
ಸಭೆಯಲ್ಲಿ ಮಾತನಾಡಿದ ಸಚಿವರು, 2015ರ ನಂತರ ಚಾಲುಕ್ಯ ಉತ್ಸವ ಆಚರಣೆ ನಡೆದಿಲ್ಲ. ಇತರ ಉತ್ಸವಗಳಂತೆ ಚಾಲುಕ್ಯ ಉತ್ಸವವೂ ಆಚರಣೆ ಆಗುವ ಬದಲಿಗೆ ಇದನ್ನೊಂದು ರಾಷ್ಟ್ರೀಯ ಕಲೆ ಮತ್ತು ಸಾಂಸ್ಕೃತಿಕ ಉತ್ಸವವನ್ನಾಗಿ ರೂಪಿಸಬೇಕು. ಇಡೀ ರಾಷ್ಟ್ರದ ಗಮನ ಸೆಳೆಯುವಂತೆ ಉತ್ಸವ ಆಚರಣೆಯಾಗಬೇಕು ಎಂದು ಹೇಳಿದರು.
ಉತ್ಸವದಲ್ಲಿ ಸಂಗೀತ, ನೃತ್ಯ ಹಾಗೂ ಜಾನಪದ ಕಲಾ ವೈಭವಗಳನ್ನು ಪ್ರತಿಬಿಂಬಿಸುವಂತಹ ಕಾರ್ಯಕ್ರಮಗಳು ಆಯೋಜನೆಯಾಗಲಿದೆ ಎಂದು ತಿಳಿಸಿದರು.
ಮೂರು ದಿನಗಳ ಕಾಲ ನಡೆಯಲಿರುವ ಉತ್ಸವಕ್ಕೆ ಬಾದಾಮಿಯಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಎರಡನೇ ದಿನ ಪಟ್ಟದಕಲ್ಲು ಹಾಗೂ ಸಮಾರೋಪ ಸಮಾರಂಭ ಐಹೊಳೆಯಲ್ಲಿ ನಡೆಯಲಿದೆ.‌ ವರ್ಷಾಂತ್ಯಕ್ಕೆ‌ ಉತ್ಸವ ಆಚರಿಸಲು ನಿರ್ಧರಿಸಲಾಗಿದ್ದು, ಮುಂದಿನ‌ ಸಭೆಯಲ್ಲಿ ದಿನಾಂಕವನ್ನು ನಿಗದಿಪಡಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಶಾಸಕ‌ ವಿಜಯಾನಂದ ಕಾಶಪ್ಪನವರ್ ಮಾತನಾಡಿ, ಇಮ್ಮಡಿ ಪುಲಿಕೇಶಿ ಕರ್ನಾಟಕದ ಚರಿತ್ರೆಯಲ್ಲಿ ತನ್ನ ಶೌರ್ಯ, ಸಾಹಸ ಹಾಗೂ ಕಲಾವಂತಿಕೆ ಮುಂತಾದ ಸಂಗತಿಗಳಿಂದಾಗಿ ಅಜರಾಮರನಾಗಿದ್ದನು. ಇಮ್ಮಡಿ ಪುಲಿಕೇಶಿಯ ಚರಿತ್ರೆಯನ್ನು ಉತ್ಸವದಲ್ಲಿ ಸಾರುವ ಕೆಲಸವಾಗಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಅಬಕಾರಿ ಸಚಿವರೂ ಆದ ಬಾಗಲಕೋಟೆ ಜಿಲ್ಲಾ‌ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ, ಮಾಜಿ ಸಚಿವ‌ ಎಚ್.ವೈ.ಮೇಟಿ, ವಿಧಾನ ಪರಿಷತ್ ಸದಸ್ಯರಾದ ಹನುಮಂತ ನಿರಾಣಿ, ಪಿ.ಎಚ್.ಪೂಜಾರ್,‌ ಉಮಾಶ್ರೀ‌, ಇಲಾಖೆ ನಿರ್ದೇಶಕಿ ಗಾಯಿತ್ರಿ ಹಾಗೂ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು