6:19 PM Tuesday12 - May 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ… ಸುವೇಂದು ಪಿಎ ಚಂದ್ರನಾಥ್ ರಾಥ್ ಹತ್ಯೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್: ಸಿಐಡಿ ತನಿಖೆ ತೈಲ ಬಳಕೆಯಲ್ಲಿ ಮಿತಿಯಿರಲಿ, ವರ್ಷದ ಮಟ್ಟಿಗೆ ಚಿನ್ನ ಖರೀದಿಸಬೇಡಿ::ಪ್ರಧಾನಿ ಮೋದಿ ಮಹತ್ವದ ಕರೆ ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ

ಇತ್ತೀಚಿನ ಸುದ್ದಿ

ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ

10/04/2026, 09:53

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಚಾಮರಾಜನಗರದ ವಿವಿಧ ಬಡಾವಣೆಗಳಲ್ಲಿ ಕಳೆದ ಕೆಲವು ದಿನಗಳಿಂದ ಮಹಿಳೆಯರಲ್ಲಿ ಆತಂಕ ಮತ್ತು ಅಚ್ಚರಿ ಮೂಡಿಸಿದ್ದ ವಿಚಿತ್ರ ಕಳ್ಳತನ ಪ್ರಕರಣಕ್ಕೆ ಈಗ ತೆರೆ ಬಿದ್ದಿದೆ. ಬಟ್ಟೆ ಒಗೆದು ಒಣಗಲು ಹಾಕಿದ್ದ ಮಹಿಳೆಯರ ಒಳ ಉಡುಪುಗಳನ್ನು ಮಾತ್ರವೇ ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಅಮೃತ್ ಎಂಬ ಸೈಕೋಪಾತ್‌ನನ್ನು ಚಾಮರಾಜನಗರ ಪಟ್ಟಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನಗರದ ಇಂದಿರಾ ನಗರ, ಹೌಸಿಂಗ್ ಬೋರ್ಡ್ ಕಾಲೋನಿ ಹಾಗೂ ಕರಿನಂಜನಪುರ ಬಡಾವಣೆಗಳಲ್ಲಿ ಕಳೆದ ಕೆಲವು ವಾರಗಳಿಂದ ನಿಗೂಢ ಕಳ್ಳತನಗಳು ನಡೆಯುತ್ತಿದ್ದವು. ಜನರು ತಮ್ಮ ಮನೆಯಂಗಳದಲ್ಲಿ ಅಥವಾ ಟೆರೇಸ್ ಮೇಲೆ ಒಗೆದು ಒಣಗಲು ಹಾಕಿದ್ದ ಬಟ್ಟೆಗಳ ಪೈಕಿ ಕೇವಲ ಮಹಿಳೆಯರ ಒಳ ಉಡುಪುಗಳು ಮಾತ್ರ ನಾಪತ್ತೆಯಾಗುತ್ತಿದ್ದವು. ಮೊದಮೊದಲು ಇದು ಗಾಳಿಗೆ ಹಾರಿ ಹೋಗಿರಬಹುದು ಎಂದು ಭಾವಿಸಿದ್ದ ನಿವಾಸಿಗಳಿಗೆ, ಪದೇ ಪದೇ ಇವೇ ಬಟ್ಟೆಗಳು ಕಾಣೆಯಾಗುತ್ತಿರುವುದು ಅನುಮಾನ ಮೂಡಿಸಿತ್ತು. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರುಗಳು ದಾಖಲಾಗಿದ್ದವು.

*ಮಧ್ಯರಾತ್ರಿ ಮಹಿಳಾ ವೇಷಧಾರಿ ಸೈಕೋಪಾತ್:*
ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರು ಬಡಾವಣೆಗಳ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಬೆಚ್ಚಿಬೀಳಿಸುವ ದೃಶ್ಯಗಳು ಕಂಡುಬಂದಿದ್ದವು. ಮಧ್ಯರಾತ್ರಿ 1 ರಿಂದ 3 ಗಂಟೆಯ ಸಮಯದಲ್ಲಿ ವ್ಯಕ್ತಿಯೊಬ್ಬ ಮಹಿಳೆಯರ ಬಟ್ಟೆಗಳನ್ನು ಧರಿಸಿ, ಮುಖಕ್ಕೆ ಮುಸುಕು ಹಾಕಿಕೊಂಡು ಜನವಸತಿ ಪ್ರದೇಶಗಳಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿರುವುದು ಕಂಡುಬಂದಿತ್ತು. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಕೊನೆಗೂ ಆರೋಪಿ ಅಮೃತ್‌ನನ್ನು ಸೆರೆಹಿಡಿದಿದ್ದಾರೆ.

*ಕಳ್ಳತನದ ವಿಚಿತ್ರ ಶೈಲಿ:*
ಆರೋಪಿ ಅಮೃತ್ ಕೇವಲ ಕಳ್ಳತನ ಮಾಡುವುದಷ್ಟೇ ಅಲ್ಲದೆ, ತಾನೂ ಕೂಡ ಮಹಿಳೆಯಂತೆ ಬಟ್ಟೆ ಧರಿಸಿ ನಿರ್ಜನ ಪ್ರದೇಶಗಳಲ್ಲಿ ಮತ್ತು ಬಡಾವಣೆಗಳ ಗಲ್ಲಿಗಳಲ್ಲಿ ಓಡಾಡುತ್ತಿದ್ದ. ಮನೆಯವರು ಮಲಗಿರುವ ಸಮಯವನ್ನು ನೋಡಿ ಕಾಂಪೌಂಡ್ ಹಾರಿ ಒಳಗೆ ನುಗ್ಗಿ, ಒಣಗಲು ಹಾಕಿದ್ದ ಒಳ ಉಡುಪುಗಳನ್ನು ಕದ್ದು ಪರಾರಿಯಾಗುತ್ತಿದ್ದ. ಈತನ ಈ ವಿಚಿತ್ರ ನಡವಳಿಕೆಯಿಂದಾಗಿ ಪೊಲೀಸರು ಈತನನ್ನು ಸೈಕೋಪಾತ್ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಈತ ಕದ್ದ ಬಟ್ಟೆಗಳನ್ನು ಏನು ಮಾಡುತ್ತಿದ್ದ? ಅಥವಾ ಯಾವುದಾದರೂ ಮಾನಸಿಕ ವಿಕೃತಿ ಹೊಂದಿದ್ದಾನೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

*ವೈದ್ಯಕೀಯ ಪರೀಕ್ಷೆಗೆ ಸೈಕೋ ಕಳ್ಳ:*
ಬಂಧಿತ ಅಮೃತ್‌ನನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ ಈತ ತನ್ನ ಕೃತ್ಯಗಳನ್ನು ಒಪ್ಪಿಕೊಂಡಿದ್ದಾನೆ. ಆದರೆ, ಆತನ ವರ್ತನೆಯಲ್ಲಿ ಅಸಹಜತೆ ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ವೈದ್ಯಕೀಯ ಪರೀಕ್ಷೆ ಮತ್ತು ಮಾನಸಿಕ ತಜ್ಞರ ತಪಾಸಣೆಗೆ ಒಳಪಡಿಸಿದ್ದಾರೆ. ಕಳ್ಳತನದ ಉದ್ದೇಶ ಕೇವಲ ಹಣ ಗಳಿಸುವುದಾಗಿರದೆ, ಯಾವುದೋ ಮಾನಸಿಕ ವಿಕೃತಿಯಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಈ ಸೈಕೋಪಾತ್ ಕಳ್ಳನ ಬಂಧನದಿಂದಾಗಿ ಇಂದಿರಾ ನಗರ ಮತ್ತು ಹೌಸಿಂಗ್ ಬೋರ್ಡ್ ಬಡಾವಣೆಯ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ರಾತ್ರಿ ವೇಳೆ ಯಾರೋ ಮಹಿಳೆಯಂತೆ ಓಡಾಡುವುದನ್ನು ನೋಡಿ ದೆವ್ವದ ಕಾಟವಿರಬಹುದು ಎಂದು ಕೆಲವರು ಭಯಗೊಂಡಿದ್ದರು. ಆದರೆ ಈಗ ಪೊಲೀಸರು ಆರೋಪಿಯನ್ನು ಬಂಧಿಸಿ ಕಂಬಿ ಹಿಂದೆ ತಳ್ಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು