5:26 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಚಾಮರಾಜನಗರ: 50 ಸಾವಿರದಾಸೆಗೆ ಮಗು ಮಾರಾಟ; ದಂಪತಿ ಬಂಧನ

21/09/2022, 17:06

ಚಾಮರಾಜನಗರ(reporterkarnataka.com): ಹಣದಾಸೆಗೆ ಮಗುವನ್ನು ಮಾರಾಟ ಮಾಡಿದ್ದ ಪ್ರಕರಣಕ್ಕೆ ಸಂಬoಧಿಸಿ ಮಗುವಿನ ಪೋಷಕರನ್ನು ನಗರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಸಪ್ಪ (35) ಮತ್ತು ಆತನ ಪತ್ನಿ ನಾಗವೇಣಿ ಎಂಬಾಕೆಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮತ್ತು ನಗರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ತಮ್ಮ ಎರಡನೇ ಮಗುವನ್ನು ಬಸಪ್ಪ ಗಾಳೀಪುರದ ವ್ಯಕ್ತಿಯೊಬ್ಬನ ಮೂಲಕ ಬೆಂಗಳೂರಿನ ವ್ಯಕ್ತಿಗೆ 50 ಸಾವಿರ ರೂ.ಗೆ 6 ದಿನಗಳ ಹಿಂದೆ ಮಾರಾಟ ಮಾಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಪತ್ನಿ ನಾಗವೇಣಿಗೆ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ತನಗೆ ಸಾಲದ ಹೊರೆ ಇದೆ. ಆದ್ದರಿಂದ ಮಗು ಮಾರಾಟ ಮಾಡೋಣ ಎಂದು ಬಸಪ್ಪ ಪತ್ನಿಯನ್ನು ಒತ್ತಾಯಿಸಿದ್ದು, ಇದಕ್ಕೆ ಪತ್ನಿ ಒಪ್ಪದಿದ್ದಾಗ ತಾನು ಮನೆ ಬಿಟ್ಟು ಹೋಗುವುದಾಗಿ ಬೆದರಿಕೆ ಹಾಕಿ ಮಗುವನ್ನು ಮಾರಾಟ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ದಂಪತಿಗೆ 7 ವರ್ಷದ ಒಬ್ಬ ಮಗನಿದ್ದು, ಒಂದು ದಿನಗಳ ಹಿಂದೆ ನಾಗವೇಣಿ ಎರಡನೇ ಗಂಡು ಮಗುವಿಗೆ ಜನ್ಮವಿತ್ತಿದ್ದಳು. ಹೆರಿಗೆಯಾಗಿ ಮನೆಗೆ ಬಂದ 28 ದಿನಗಳಲ್ಲೇ ಬಸಪ್ಪ ತನ್ನ ಜೊತೆ ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಗಾಳೀಪುರದ ವ್ಯಕ್ತಿಯೊಬ್ಬನನ್ನು ಕರೆತಂದು ಮೊಬೈಲ್‌ನಲ್ಲಿ ಮಗುವಿನ ಫೋಟೋ ತೆಗೆದುಕೊಂಡು ಹೋಗಿದ್ದ. ನಾಲ್ಕೆದು ದಿನಗಳ ನಂತರ ದಂಪತಿಯನ್ನು ಗಾಳೀಪುರದ ಮನೆಯೊಂದಕ್ಕೆ ಕರೆಸಿಕೊಂಡು ಮಗುವನ್ನು ಬೆಂಗಳೂರಿನ ವ್ಯಕ್ತಿಗೆ ಮಾರಾಟ ಮಾಡಲಾಯಿತು. ಬಸಪ್ಪನಿಗೆ 50 ಸಾವಿರ ರೂ. ನೀಡಲಾಗಿದೆ ಎಂದು ಮಹಿಳಾ ರಕ್ಷಣಾ ಘಟಕದ ಅಧಿಕಾರಿ ಕುಮಾರ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು