7:00 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

Chamarajanagara | ಸಂಪುಟ ಸದಸ್ಯರು ದೇವಾಲಯಕ್ಕೆ: ಸಚಿವ ಮಹದೇವಪ್ಪ ಬುಡಕಟ್ಟು ಸಮುದಾಯಗಳ ಕಾಲೋನಿಗಳಿಗೆ ಭೇಟಿ

25/04/2025, 11:28

ಮಲೆಮಹದೇಶ್ವರಬೆಟ್ಟ(reporterkarnataka.com): ನಾಡಿನ ಐತಿಹಾಸಿಕ ತಾಣವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಸರ್ಕಾರದ ಕ್ಯಾಬಿನೆಟ್ ಸಭೆ ನಡೆಯುತ್ತಿದ್ದು ಇಡೀ ಸರ್ಕಾರವೇ ಚಾಮರಾಜನಗರದ ಮಹದೇಶ್ವರ ಬೆಟ್ಟದಲ್ಲಿ ಬೀಡು ಬಿಟ್ಟಿದೆ.


ಸಹಜವಾಗಿ ಇಲ್ಲಿಗೆ ಆಗಮಿಸಿದ ಸಚಿವರೆಲ್ಲರೂ ಕೂಡಾ ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆಯುವುದು ವಾಡಿಕೆ. ಇಂದು ಸಚಿವರೆಲ್ಲಾ ಒಬ್ಬೊಬ್ಬರಾಗಿ ಮಹದೇಶ್ವರ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆಯುತ್ತಿರುವ ಸಂದರ್ಭದಲ್ಲಿ, ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್. ಸಿ. ಮಹದೇವಪ್ಪನವರು ಇದಕ್ಕೆ ವಿಭಿನ್ನವಾಗಿ ಬೆಟ್ಟಕ್ಕೆ ಹತ್ತಿರ ಇರುವ ಬುಡಕಟ್ಟು ಸಮುದಾಯಗಳ ಜನತಾ ಕಾಲೋನಿಗೆ ಭೇಟಿ ನೀಡಿ, ಸಂಕಷ್ಟಗಳನ್ನು ಆಲಿಸುವ ಮೂಲಕ ಮಾದರಿ ಆಗಿದ್ದಾರೆ.
ಸುಮಾರು ಒಂದು ಗಂಟೆಯ ಕಾಲ ಅಲ್ಲಿನ ಜನರೊಂದಿಗೆ ಮಾತುಕತೆ ನಡೆಸಿದ ಸಚಿವರು, ಜನತಾ ದೇವಾಲಯಕ್ಕೆ ತೆರಳಿ ಅವರನ್ನು ಆಲಿಸಿದ್ದು ಅತ್ಯಂತ ವಿಶೇಷವಾಗಿತ್ತು.
ಈ ಬಗ್ಗೆ ಮಾಧ್ಯಮ ಮಿತ್ರರು ಪ್ರಶ್ನೆ ಕೇಳಲಾಗಿ, ದೇವಸ್ಥಾನಕ್ಕಿಂತಲೂ ಜನರ ಬಳಿ ಹೋಗುವುದು ಹೆಚ್ಚು ಪೂರಕವಾದಂತ ಸಂಗತಿಯಾಗಿದ್ದು, ಜನರ ಮಾತುಗಳೇ ದೈವದ ಮಾತಾಗಿದೆ ಎಂದು ಹೇಳುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು