5:07 PM Friday6 - March 2026
ಬ್ರೇಕಿಂಗ್ ನ್ಯೂಸ್
ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ…

ಇತ್ತೀಚಿನ ಸುದ್ದಿ

Chamarajanagara | ಸಂಪುಟ ಸದಸ್ಯರು ದೇವಾಲಯಕ್ಕೆ: ಸಚಿವ ಮಹದೇವಪ್ಪ ಬುಡಕಟ್ಟು ಸಮುದಾಯಗಳ ಕಾಲೋನಿಗಳಿಗೆ ಭೇಟಿ

25/04/2025, 11:28

ಮಲೆಮಹದೇಶ್ವರಬೆಟ್ಟ(reporterkarnataka.com): ನಾಡಿನ ಐತಿಹಾಸಿಕ ತಾಣವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಸರ್ಕಾರದ ಕ್ಯಾಬಿನೆಟ್ ಸಭೆ ನಡೆಯುತ್ತಿದ್ದು ಇಡೀ ಸರ್ಕಾರವೇ ಚಾಮರಾಜನಗರದ ಮಹದೇಶ್ವರ ಬೆಟ್ಟದಲ್ಲಿ ಬೀಡು ಬಿಟ್ಟಿದೆ.


ಸಹಜವಾಗಿ ಇಲ್ಲಿಗೆ ಆಗಮಿಸಿದ ಸಚಿವರೆಲ್ಲರೂ ಕೂಡಾ ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆಯುವುದು ವಾಡಿಕೆ. ಇಂದು ಸಚಿವರೆಲ್ಲಾ ಒಬ್ಬೊಬ್ಬರಾಗಿ ಮಹದೇಶ್ವರ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆಯುತ್ತಿರುವ ಸಂದರ್ಭದಲ್ಲಿ, ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್. ಸಿ. ಮಹದೇವಪ್ಪನವರು ಇದಕ್ಕೆ ವಿಭಿನ್ನವಾಗಿ ಬೆಟ್ಟಕ್ಕೆ ಹತ್ತಿರ ಇರುವ ಬುಡಕಟ್ಟು ಸಮುದಾಯಗಳ ಜನತಾ ಕಾಲೋನಿಗೆ ಭೇಟಿ ನೀಡಿ, ಸಂಕಷ್ಟಗಳನ್ನು ಆಲಿಸುವ ಮೂಲಕ ಮಾದರಿ ಆಗಿದ್ದಾರೆ.
ಸುಮಾರು ಒಂದು ಗಂಟೆಯ ಕಾಲ ಅಲ್ಲಿನ ಜನರೊಂದಿಗೆ ಮಾತುಕತೆ ನಡೆಸಿದ ಸಚಿವರು, ಜನತಾ ದೇವಾಲಯಕ್ಕೆ ತೆರಳಿ ಅವರನ್ನು ಆಲಿಸಿದ್ದು ಅತ್ಯಂತ ವಿಶೇಷವಾಗಿತ್ತು.
ಈ ಬಗ್ಗೆ ಮಾಧ್ಯಮ ಮಿತ್ರರು ಪ್ರಶ್ನೆ ಕೇಳಲಾಗಿ, ದೇವಸ್ಥಾನಕ್ಕಿಂತಲೂ ಜನರ ಬಳಿ ಹೋಗುವುದು ಹೆಚ್ಚು ಪೂರಕವಾದಂತ ಸಂಗತಿಯಾಗಿದ್ದು, ಜನರ ಮಾತುಗಳೇ ದೈವದ ಮಾತಾಗಿದೆ ಎಂದು ಹೇಳುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು