4:52 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಚಾಮುಂಡಿ ಬೆಟ್ಟಕ್ಕೆ ರೋಪ್‌ ವೇ ನಿರ್ಮಾಣ ಬೇಡ, ಅದು ಶ್ರದ್ಧಾ ಕೇಂದ್ರವಾಗೇ ಉಳಿಯಲಿ: ಎಂದ ಸಂಸದ ಪ್ರತಾಪ್‌ ಸಿಂಹ

07/07/2022, 10:53

ಮೈಸೂರು(reporterkarnataka.com): ಚಾಮುಂಡಿ ಬೆಟ್ಟಕ್ಕೆ ರೋಪ್‌ ವೇ ನಿರ್ಮಾಣಮಾಡಿದರೆ ಅದು ಪ್ರವಾಸಿಗರ ತಾಣವಾಗಿಬಿಡುವ ಆತಂಕವಿದೆ. ಹಾಗಾಗಬಾರದು. ಚಾಮುಂಡಿ ಬೆಟ್ಟವು ತಾಯಿ ಚಾಮುಂಡೇಶ್ವರಿಯ ಕ್ಷೇತ್ರ, ಅನೇಕ ಶ್ರದ್ಧಾಳುಗಳು ತಾಯಿಯ ಆಶೀರ್ವಾದ ಪಡೆಯಲು ಇಲ್ಲಿಗೆ ಬರುತ್ತಾರೆ. ಹಾಗಾಗಿ ಚಾಮುಂಡಿ ಬೆಟ್ಟವು ಶ್ರದ್ಧಾ ಕೇಂದ್ರವಾಗೇ ಉಳಿಯಬೇಕು. ಈ ಹಿನ್ನೆಲೆಯಲ್ಲಿ ರೋಪ್‌ ವೇ ಕಾಮಗಾರಿಗೆ ವಿರೋಧ ವ್ಯಕ್ತಪಡಿಸಲಾಗಿದೆ ಎಂದು ಮೈಸೂರು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿರುವ ಅವರು “ಚಾಮುಂಡಿ ಬೆಟ್ಟವು ಶ್ರದ್ಧಾ ಕೇಂದ್ರವಾಗೇ ಉಳಿಯಲಿ. ಹಾಗಾಗಿ ರೋಪ್‌ವೇ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಲಾಗಿದ್ದು ಶಾಸಕ ಜಿಟಿ ದೇವೇಗೌಡರು ಹಾಗೂ ಸಚಿವ ಎಸ್‌ಟಿ ಸೋಮಶೇಖರ್‌ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲಯಲ್ಲಿ ರೋಪ್‌ವೇ ನಿರ್ಮಾಣವನ್ನು ಕೈ ಬಿಡಲಾಗುವುದು” ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು