8:44 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಚಂಡಮಾರುತ ಎಫೆಕ್ಟ್: ಮಂಗಳೂರು ಸೇರಿದಂತೆ ಹಲವೆಡೆ ಭಾರಿ ಮಳೆ; ರೆಡ್ ಅಲರ್ಟ್ ಘೋಷಣೆ

15/05/2021, 10:45

ಮಂಗಳೂರು(reporterkarnataka news): ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆ ಹಾಗೂ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಶನಿವಾರ ಮುಂಜಾನೆಯಿಂದಲೇ ಭಾರಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದೊಂದು ವಾರಗಳಿಂದ ಮಳೆಯಾಗುತ್ತಿದೆ. ಉತ್ತರ ಕರ್ನಾಟಕ ಭಾಗದಲ್ಲೂ ಮಳೆಯ ಆರ್ಭಟ ಜೋರಾಗಿದ್ದು, ಮೇ 16ರವರೆಗೆ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಹಾಸನ, ರಾಮನಗರ ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದೆ. ಇನ್ನೂ 3 ದಿನಗಳ ಕಾಲ ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರಿನಲ್ಲಿ ಮಳೆ ಹೆಚ್ಚಳವಾಗುವ ಸಾಧ್ಯತೆಯಿದೆ. ಮೇ 16ರಂದು ಕರ್ನಾಟಕಕ್ಕೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 16ರಂದು ಅರಬ್ಬಿ ಸಮುದ್ರದಲ್ಲಿ ಈ ವರ್ಷದ ಮೊದಲ ಚಂಡಮಾರುತ ಅಪ್ಪಳಿಸಲಿದ್ದು, ಇದಕ್ಕೆ ತೌಕ್ತೆ ಚಂಡಮಾರುತ ಎಂದು ಹೆಸರಿಡಲಾಗಿದೆ. ಕರ್ನಾಟಕ, ಕೇರಳ, ತಮಿಳುನಾಡು ಸೇರಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಚಂಡಮಾರುತ ಅಬ್ಬರಿಸಲಿದೆ. ಹೀಗಾಗಿ, ಮುಂದಿನ 1 ವಾರಗಳ ಕಾಲ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಮೇ 15ರಂದು ಮಹಾರಾಷ್ಟ್ರ ಮತ್ತು ಗೋವಾದಲ್ಲಿಯೂ ಚಂಡಮಾರುತ ಅಬ್ಬರ ಹೆಚ್ಚಾಗಲಿದೆ. ಕರ್ನಾಟಕದಲ್ಲಿ ಮೇ 16ರಂದು ಗಂಟೆಗೆ 40ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ, ಅನೇಕ ಜಿಲ್ಲೆಗಳಲ್ಲಿ ಇನ್ನು 3 ದಿನ ರೆಡ್ ಅಲರ್ಟ್ ಘೋಷಿಸಲಾಗಿದೆ. 

15ರಂದು ಚಂಡಮಾರುತದ ಪರಿಣಾಮವಾಗಿ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ದೊರೆತಿದೆ. ಹೀಗಾಗಿ ಜನರು ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ನೋಟಿಸ್ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಉತ್ತರ ಕನ್ನಡ, ಚಿತ್ರದುರ್ಗದಲ್ಲಿ ಇಂದು ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಕರ್ನಾಟಕ ಮಾತ್ರವಲ್ಲದೆ ನೆರೆಯ ರಾಜ್ಯವಾದ ಕೇರಳ, ಅಸ್ಸಾಂ, ಸಿಕ್ಕಿಂ, ಪಶ್ಚಿಮ ಬಂಗಾಳ, ಮೇಘಾಲಯದಲ್ಲೂ ಇಂದು ಮಳೆ ಹೆಚ್ಚಾಗಲಿದೆ. ಜೂನ್ 1ರಂದು ಕೇರಳಕ್ಕೆ ಮಾನ್ಸೂನ್ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 15ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಬೆಂಗಳೂರಿನಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಮೇ 16ರಂದು ಚಂಡಮಾರುತ ಉಂಟಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು