10:41 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಚಂಡಮಾರುತದ ಅಬ್ಬರ: ಕಡವಿನಬಾಗಿಲು ನಂದಿನಿ ನದಿ ಬದಿಯಲ್ಲಿ ಕಟ್ಟಲಾಗಿರುವ ರಸ್ತೆ ತಡೆಗೋಡೆ ಕುಸಿತ

17/05/2021, 20:06

ಹಳೆಯಂಗಡಿ(reporterkarnataka news);

ಹೊಯ್ಗೆಗುಡ್ಡೆ-ಕದಿಕೆ ನದಿ ಬದಿ ಮೂಲಕ ಚಿತ್ರಾಪು ಮತ್ತು ಸಸಿಹಿತ್ಲುಗಳನ್ನು ಸಂಪರ್ಕಿಸುವ ನೇರ ಸಂಪರ್ಕ ರಸ್ತೆಗೆ ಕಡವಿನಬಾಗಿಲು ಸಮೀಪ ನಂದಿನಿ ನದಿಯ ಬದಿಯಲ್ಲಿ ಕಟ್ಟಲಾಗಿರುವ ರಸ್ತೆ ತಡೆಗೋಡೆ ಕುಸಿದಿದೆ.

2015ರಲ್ಲಿ ರಸ್ತೆ ನಿರ್ಮಾಣವಾದಂದಿನಿಂದಲೂ ಈ ಸ್ಥಳದಲ್ಲಿ ರಸ್ತೆ ತಡೆಗೋಡೆ ಬೇರೆ ಬೇರೆ ಕಡೆಗಳಲ್ಲಿ ಹಲವು ಬಾರಿ ಕುಸಿದಿದೆ. ಪ್ರಸಕ್ತ ಕುಸಿದಿರುವ ತಡೆಗೋಡೆ ಕಳೆದ ವರ್ಷವೇ ಬಿರುಕುಬಿಟ್ಟಿದ್ದು, ಇತ್ತೀಚಿನ ದಿನಗಳಲ್ಲಿ ಬಿರುಕು ಹೆಚ್ಚುತ್ತಾ ಹೋಗಿತ್ತು. ಕೊನೆಗೆ ಮೊನ್ನೆಯ ‘ತೌಕ್ತೆ’ ಚಂಡಮಾರುತದ ನೀರಿನ ಪ್ರವಾಹ ಮತ್ತು ಅಬ್ಬರದ ಅಲೆಗಳ ಆಘಾತಕ್ಕೆ ಕುಸಿದು ಹೋಗಿದೆ.

ಈ ರಸ್ತೆಯು ಕದಿಕೆ-ಹೊಯ್ಗೆಗುಡ್ಡೆ ಪ್ರದೇಶದ ಜೀವನಾಡಿಯಾಗಿದ್ದು, ಚಿತ್ರಾಪು ಮತ್ತು ಸಸಿಹಿತ್ಲುಗಳನ್ನು ಸಂಪರ್ಕಿಸುವ ಪ್ರಮುಖ ಸಂಪರ್ಕ ರಸ್ತೆಯಾಗಿದೆ. ಈಗಾಗಲೇ ಮಳೆಗಾಲ ಆರಂಭವಾಗಿದೆ. ರಸ್ತೆಯು ಮಳೆಗಾಲದಲ್ಲಿ ನಂದಿನಿ ನದಿಯ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುವ ಮುನ್ನ ತಕ್ಷಣ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕೆಂದು ಹೊಯ್ಗೆಗುಡ್ಡೆ, ಕದಿಕೆ, ಚಿತ್ರಾಪು, ಸಸಿಹಿತ್ಲು, ಹಳೆಯಂಗಡಿ, ಪಡುಪಣಂಬೂರಿನ ಜನರು ಮೀನುಗಾರಿಕಾ ಇಲಾಖೆಯ ಎಂಜಿನಿಯರ್ ಗಳನ್ನು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು