7:57 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಚಂಡಮಾರುತದ ಅಬ್ಬರ: ಕಡವಿನಬಾಗಿಲು ನಂದಿನಿ ನದಿ ಬದಿಯಲ್ಲಿ ಕಟ್ಟಲಾಗಿರುವ ರಸ್ತೆ ತಡೆಗೋಡೆ ಕುಸಿತ

17/05/2021, 20:06

ಹಳೆಯಂಗಡಿ(reporterkarnataka news);

ಹೊಯ್ಗೆಗುಡ್ಡೆ-ಕದಿಕೆ ನದಿ ಬದಿ ಮೂಲಕ ಚಿತ್ರಾಪು ಮತ್ತು ಸಸಿಹಿತ್ಲುಗಳನ್ನು ಸಂಪರ್ಕಿಸುವ ನೇರ ಸಂಪರ್ಕ ರಸ್ತೆಗೆ ಕಡವಿನಬಾಗಿಲು ಸಮೀಪ ನಂದಿನಿ ನದಿಯ ಬದಿಯಲ್ಲಿ ಕಟ್ಟಲಾಗಿರುವ ರಸ್ತೆ ತಡೆಗೋಡೆ ಕುಸಿದಿದೆ.

2015ರಲ್ಲಿ ರಸ್ತೆ ನಿರ್ಮಾಣವಾದಂದಿನಿಂದಲೂ ಈ ಸ್ಥಳದಲ್ಲಿ ರಸ್ತೆ ತಡೆಗೋಡೆ ಬೇರೆ ಬೇರೆ ಕಡೆಗಳಲ್ಲಿ ಹಲವು ಬಾರಿ ಕುಸಿದಿದೆ. ಪ್ರಸಕ್ತ ಕುಸಿದಿರುವ ತಡೆಗೋಡೆ ಕಳೆದ ವರ್ಷವೇ ಬಿರುಕುಬಿಟ್ಟಿದ್ದು, ಇತ್ತೀಚಿನ ದಿನಗಳಲ್ಲಿ ಬಿರುಕು ಹೆಚ್ಚುತ್ತಾ ಹೋಗಿತ್ತು. ಕೊನೆಗೆ ಮೊನ್ನೆಯ ‘ತೌಕ್ತೆ’ ಚಂಡಮಾರುತದ ನೀರಿನ ಪ್ರವಾಹ ಮತ್ತು ಅಬ್ಬರದ ಅಲೆಗಳ ಆಘಾತಕ್ಕೆ ಕುಸಿದು ಹೋಗಿದೆ.

ಈ ರಸ್ತೆಯು ಕದಿಕೆ-ಹೊಯ್ಗೆಗುಡ್ಡೆ ಪ್ರದೇಶದ ಜೀವನಾಡಿಯಾಗಿದ್ದು, ಚಿತ್ರಾಪು ಮತ್ತು ಸಸಿಹಿತ್ಲುಗಳನ್ನು ಸಂಪರ್ಕಿಸುವ ಪ್ರಮುಖ ಸಂಪರ್ಕ ರಸ್ತೆಯಾಗಿದೆ. ಈಗಾಗಲೇ ಮಳೆಗಾಲ ಆರಂಭವಾಗಿದೆ. ರಸ್ತೆಯು ಮಳೆಗಾಲದಲ್ಲಿ ನಂದಿನಿ ನದಿಯ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುವ ಮುನ್ನ ತಕ್ಷಣ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕೆಂದು ಹೊಯ್ಗೆಗುಡ್ಡೆ, ಕದಿಕೆ, ಚಿತ್ರಾಪು, ಸಸಿಹಿತ್ಲು, ಹಳೆಯಂಗಡಿ, ಪಡುಪಣಂಬೂರಿನ ಜನರು ಮೀನುಗಾರಿಕಾ ಇಲಾಖೆಯ ಎಂಜಿನಿಯರ್ ಗಳನ್ನು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು