9:43 PM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಚಂದನವನವನ್ನು ಅಗಲಿದ ಹಿರಿಯ ನಟ ಶಿವರಾಮ್ ; ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಶಾಕ್

04/12/2021, 14:50

ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ (84) ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಇನ್ನೊಂದು ಹೊಡೆತ ಬಿದ್ದಂತಾಗಿದೆ.

ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿತ್ತು, ಕೋಮಾಗೆ ಸ್ಥಿತಿಗೆ ತಲುಪಿದ್ದರೆಂದು ಶುಕ್ರವಾರ ಹೇಳಲಾಗಿತ್ತು. ಶನಿವಾರ ಮಧ್ಯಾಹ್ನ ಮಿದುಳು ಕೆಲಸ ಮಾಡುವುದು ನಿಲ್ಲಿಸಿದೆ ಎಂದು ವರದಿಯಾಗಿತ್ತು. ಬಳಿಕ ನಿಧನರಾಗಿದ್ದಾರೆ ಎಂದು ಆಸ್ಪತ್ರೆ ಘೋಷಿಸಿದೆ.

ಇತ್ತೀಚಿಗೆ ಕಾರಿನಲ್ಲಿ ಶಿವರಾಂ ಹೊರಗೆ ಹೋಗಿದ್ದರು. ಆ ವೇಳೆ ಅಪಘಾತ ಸಂಭವಿಸಿ ತಲೆಗೆ ಸ್ವಲ್ಪ ಪೆಟ್ಟಾಗಿತ್ತು. ಬಳಿಕ ಕುಟುಂಬಸ್ಥರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷೆ ನಡೆಸಿದಾಗ ವರದಿಯಲ್ಲಿ ಯಾವುದೇ ಸಮಸ್ಯೆಗಳೂ ಪತ್ತೆಯಾಗಿರಲಿಲ್ಲ.

ಕಳೆದ ಮಂಗಳವಾರ ರಾತ್ರಿ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ನಡೆಸಲಾಗಿದ್ದು, ಪೂಜೆ ಮಾಡಲು ಶಿವರಾಂ ಅವರು ಪೂಜೆ ಮನೆಗೆ ಹೋದಾಗ ಕೆಳಗೆ ಬಿದ್ದಿದ್ದಾರೆ. ಈ ವೇಳೆ ತಲೆಗೆ ಗಂಭೀರವಾಗಿ ಪೆಟ್ಟಾಗಿದೆ. ಆಸ್ಪತ್ರೆಗೆ ದಾಖಲಿಸಿದ ವೇಳೆ ಮಿದುಳಿನಲ್ಲಿ ರಕ್ತಸ್ರಾವವಾಗಿರುವುದು ಕಂಡು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು