5:12 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆ: ಆಮ್ ಆದ್ಮಿ ಪಾರ್ಟಿ ಮೇಲುಗೈ: ಬಿಜೆಪಿ, ಕಾಂಗ್ರೆಸ್ ಗೆ ಹಿನ್ನಡೆ

28/12/2021, 12:51

ಚಂಡೀಗಢ(reporterkarnataka.com):.ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) 14 ಸ್ಥಾನಗಳನ್ನು ಗೆಲ್ಲುವ ಮೂಲಕ ಅತೀ ದೊಡ್ಡ ಪಕ್ಷವಾಗಿ ಮೂಡಿ ಬಂದಿದೆ.

ಒಟ್ಟು 35 ಸ್ಥಾನಗಳ ಪೈಕಿ ಉಳಿದಂತೆ ಬಿಜೆಪಿ 12, ಕಾಂಗ್ರೆಸ್ 8 ಮತ್ತು ಶಿರೋಮಣಿ ಅಕಾಲಿದಳ 1 ಸ್ಥಾನ ಗೆದ್ದಿದೆ. ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ ಪಕ್ಷದ ಹಿರಿಯ ನಾಯಕ ರಾಘವ್ ಚಡ್ಡಾ ಅವರು “ಜನರು ವರ್ಷಗಳಿಂದ ಬದಲಾವಣೆಗಾಗಿ ಹಂಬಲಿಸುತ್ತಿದ್ದಾಗ ಕೇಜ್ರಿವಾಲ್ ಅವರ ಆಡಳಿತದ ಮಾದರಿಯ ವಿಜಯ ಇದಾಗಿದೆ” ಎಂದು ಹೇಳಿದರು. ಮಹಾನಗರ ಪಾಲಿಕೆಯ 35 ವಾರ್ಡ್‌ಗಳಿಗೆ 9 ಮತ ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು.

ಬೆಳಗ್ಗೆ 9 ಗಂಟೆಗೆ ಮತ ಎಣಿಕೆ ಆರಂಭವಾಯಿತು. ಡಿಸೆಂಬರ್ 24 ರಂದು ನಡೆದ ಮತದಾನದ ಶೇಕಡಾವಾರು ಈ ವರ್ಷ ಶೇಕಡಾ 60.45 ರಷ್ಟು ಆಗಿತ್ತು. ಸಾಂಪ್ರದಾಯಿಕವಾಗಿ ಪ್ರತಿ ಐದು ವರ್ಷಗಳಿಗೊಮ್ಮೆ ನಡೆಯುವ ಪುರಸಭೆ ಚುನಾವಣೆ – ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನಡೆಯುತ್ತಿತ್ತು. ಆದರೆ ಈ ಬಾರಿ ಆಮ್ ಆದ್ಮಿ ಪಕ್ಷದ ಪ್ರವೇಶದಿಂದ ತ್ರಿಕೋನ ಸ್ಪರ್ಧೆ ನಡೆದಿತ್ತು .

ಇತ್ತೀಚಿನ ಸುದ್ದಿ

ಜಾಹೀರಾತು