10:38 PM Wednesday4 - June 2025
ಬ್ರೇಕಿಂಗ್ ನ್ಯೂಸ್
Bangalore | ಐಪಿಎಲ್ ವಿಜಯೋತ್ಸವ: ಕಾಲ್ತುಳಿತಕ್ಕೆ 11 ಮಂದಿ ಸಾವು: ಮ್ಯಾಜಿಸ್ಟ್ರೀಯಲ್ ತನಿಖೆಗೆ… ಆರ್ ಸಿಬಿ ಗೆಲುವು ಅತೀವ ಸಂತೋಷ ತಂದಿದೆ; ವಿಧಾನಸೌಧ ಎದುರು ಇಂದು ತಂಡಕ್ಕೆ… Chikkamagaluru | ಕೋರ್ಟ್ ಆದೇಶ: ಅರಣ್ಯ ಇಲಾಖೆಯಿಂದ 43 ಎಕರೆ ಒತ್ತುವರಿ ಭೂಮಿ… 150 ವರ್ಷದ ಬಳಿಕ ಬೆಂಗಳೂರಿನ ಮಾದಪ್ಪನಹಳ್ಳಿಯಲ್ಲಿ ಮತ್ತೊಂದು ಬೃಹತ್ ಉದ್ಯಾನ: 154 ಎಕರೆ… ಎರಡು ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್‌ ಪಡೆಯಿರಿ: ಪ್ರತಿಪಕ್ಷ… ಪ್ರಧಾನಿ ಮೋದಿ ಸಂಕಲ್ಪದಂತೆ ದೇಶಿಯ ಎಲೆಕ್ಟ್ರಿಕ್‌ ಕಾರುಗಳ ಉತ್ಪಾದನೆಗೆ ಕೇಂದ್ರದಿಂದ ಬೃಹತ್‌ ಯೋಜನೆ:… ಕಡೂರು: ಮನೆ ಮುಂದೆ ನಿಲ್ಲಿಸಿದ್ದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರ ಕಾರಿನ… Chikkamagaluru | ಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್; ಇಬ್ಬರು… ರಾಜ್ಯದಲ್ಲಿ ಹುಕ್ಕಾ ಬಾರ್ ಗಳ ನಿಷೇಧಕ್ಕೆ ರಾಷ್ಟ್ರಪತಿ ಅಂಕಿತ: ತಂಬಾಕು ಉತ್ಪನ್ನ ಖರೀದಿ… ತುಮಕೂರು ಹೇಮಾವತಿ ನದಿ ಕೆನಾಲ್ ಯೋಜನೆ ಸಮಸ್ಯೆ ಬಗೆಹರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಇತ್ತೀಚಿನ ಸುದ್ದಿ

ಚಂದ್ರನಿಗೆ ಅಪ್ಪಳಿಸಲಿದೆ ಸ್ಪೇಸ್‍ಎಕ್ಸ್ ರಾಕೆಟ್: ಖಗೋಳ ಶಾಸ್ತ್ರಜ್ಞರು ಹೇಳುವುದೇನು?

27/01/2022, 23:10

ವಾಷಿಂಗ್ಟನ್(reporterkarnataka.com): ಏಳು ವರ್ಷಗಳ ಹಿಂದೆ ಉಡಾವಣೆಯಾದ ಸ್ಪೇಸ್‍ಎಕ್ಸ್ ರಾಕೆಟ್ ಮಾರ್ಚ್ ತಿಂಗಳಿನಲ್ಲಿ ಚಂದ್ರನಿಗೆ ಅಪ್ಪಳಿಸಲಿದೆ ಎಂದು ಖಗೋಳ ಶಾಸ್ತ್ರಜ್ಞರು ಎಚ್ಚರಿಸಿದ್ದಾರೆ.

ಫೆಬ್ರವರಿ 2015 ರಲ್ಲಿ ಅಂತರಗ್ರಹ ಕಾರ್ಯಾಚರಣೆಯ ಭಾಗವಾಗಿ ಉಡಾವಣೆಯಾದ ಫಾಲ್ಕನ್ 9 ಬೂಸ್ಟರ್ ರಾಕೆಟ್ ಇಂಧನ ಖಾಲಿಯಾಗಿ ಕಕ್ಷೆಯಲ್ಲಿ ಅಸ್ತವ್ಯಸ್ತವಾಗಿ ಸುತ್ತುತ್ತಿದೆ.

ಈಗ ನಾಲ್ಕು ಟನ್ ತೂಕದ ಸೆಕೆಂಡ್‍ಗೆ 2.58 ಕಿ.ಮೀ ವೇಗದಲ್ಲಿ ಸಂಚರಿಸುವ ರಾಕೆಟ್ ಚಂದ್ರನನ್ನು ಅಪ್ಪಳಿಸುವ ನಿರೀಕ್ಷೆಯಿದೆ ಎಂದು ಖಗೋಳ ಶಾಸ್ತ್ರಜ್ಞರು ತಿಳಿಸಿದ್ದಾರೆ.

ಖಗೋಳವಿಜ್ಞಾನಿ ಬಿಲ್ ಗ್ರೇ ಈ ರಾಕೆಟ್ ಪಥವನ್ನು ಟ್ರ್ಯಾಕ್ ಮಾಡುತ್ತಿದ್ದಾರೆ. ರಾಕೆಟ್ ವೀಕ್ಷಿಸುತ್ತಿರುವ ಖಗೋಳಶಾಸ್ತ್ರಜ್ಞರು ಡೇಟಾವನ್ನು ಸಂಗ್ರಹಿಸುತ್ತಿದ್ದು, ಯಾವಾಗ ರಾಕೆಟ್ ಚಂದ್ರನಿಗೆ ಅಪ್ಪಳಿಸಬಹುದೆಂದು ಲೆಕ್ಕಾಚಾರ ಮಾಡುತ್ತಿದ್ದಾರೆ.

ಮಾರ್ಚ್ 4 ರಂದು ಈ ರಾಕೆಟ್ ಅಪ್ಪಳಿಸಬಹುದು ಎಂದು ಅಂದಾಜಿಸಲಾಗಿದ್ದರೂ ಚಂದ್ರನ ಯಾವ ಭಾಗಕ್ಕೆ ಅಪ್ಪಳಿಸಬಹುದು ಎಂಬುದನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಇದು ಬಹಳ ಕಠಿಣ ವಿಚಾರ ಎಂದು ತಜ್ಞರು ತಿಳಿಸಿದ್ದಾರೆ.

ಯಾವುದೇ ಉದ್ದೇಶವಿಲ್ಲದೇ ಬಾಹ್ಯಾಕಾಶದ ಕಸವೊಂದು ಚಂದ್ರನ ಮೇಲೆ ಅಪ್ಪಳಿಸುತ್ತಿರುವುದು ಇದೇ ಮೊದಲು. ಅಪ್ಪಳಿಸಿದ ನಂತರ ಸೃಷ್ಟಿಯಾಗುವ ಕುಳಿಯ ಬಗ್ಗೆ ತಿಳಿಯುವ ವೈಜ್ಞಾನಿಕ ಕುತೂಹಲ ಹೆಚ್ಚಾಗಿದೆ ಎಂದು ಬಿಲ್ ಗ್ರೇ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು