4:18 AM Monday30 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ಚಂದ್ರಗಿರಿಯ ತೀರದಲ್ಲಿ’ ಖ್ಯಾತಿಯ ಪ್ರಸಿದ್ಧ ಸಾಹಿತಿ ಸಾರಾ ಅಬೂಬಕ್ಕರ್ ಇನ್ನಿಲ್ಲ

10/01/2023, 19:42

ಮಂಗಳೂರು(reporterkarnataka.com): ಪ್ರಸಿದ್ಧ ಕಾದಂಬರಿಗಾರ್ತಿ ಸಾರಾ ಅಬೂಬಕ್ಕರ್ (87) ಮಂಗಳವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು.

ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಮಂಗಳವಾರ ಅವರು ಕೊನೆಯುಸಿರೆಳೆದರು ಎಂದು ಆಪ್ತ ಮೂಲಗಳು ತಿಳಿಸಿವೆ.
ಚಂದ್ರಗಿರಿ ತೀರದಲ್ಲಿ ಕಾದಂಬರಿ ಮೂಲಕ ಸಾರಾ ಅಬೂಬಕ್ಕರ್ ಅವರು ಕನ್ನಡ ಸಾಹಿತ್ಯ ಲೋಕದಲ್ಲಿ ಪ್ರವರ್ಧಮಾನಕ್ಕೆ ಬಂದಿದ್ದರು. ಲಂಕೇಶ್ ಪತ್ರಿಕೆಯಲ್ಲಿ ಅವರ ಚಂದ್ರಗಿರಿಯ ತೀರದಲ್ಲಿ ಕಾದಂಬರಿ ಧಾರಾವಾಹಿ ರೂಪದಲ್ಲಿ ಪ್ರಕಟವಾಗುತ್ತಿತ್ತು.

ಕಾಸರಗೋಡು ಜಿಲ್ಲೆಯ ‘ಪುದಿಯಾಪುರ್’ ತರವಾಡು ಮನೆಯಲ್ಲಿ ಪಿ. ಅಹ್ಮದ್ ಮತ್ತು ಜೈನಾಬಿ ದಂಪತಿ ಮಗಳಾಗಿ ಜನಿಸಿದ್ದ ಸಾರಾ 1984ರಲ್ಲಿ ‘ಚಂದ್ರಗಿರಿಯ ತೀರದಲ್ಲಿ’ ಕಾದಂಬರಿಯ ಬರೆದಿದ್ದರು. ಕನ್ನಡ ಸಾರಸ್ವತ ಲೋಕದಲ್ಲಿ ಈ ಕಾದಂಬರಿ ಸಾಕಷ್ಟು ಸದ್ದು ಮಾಡಿತ್ತು ಹಾಗೆ ಸಾರಾ ಅವರನ್ನು ಪ್ರಖ್ಯಾತಿಯ ಶಿಖರಕ್ಕೆ ಏರಿಸಿತ್ತು.
ಈ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಬಂದಿವೆ. ಕಾದಂಬರಿಯು ದಕ್ಷಿಣ ಭಾರತದ ಹಲವು ಭಾಷೆಗಳು ಮಾತ್ರವಲ್ಲದೆ, ಹಿಂದಿ ಮತ್ತು ಒರಿಯಾ ಭಾಷೆಗೆ ಅನುವಾದಗೊಂಡಿತು.

ಅವರು ಸಹನಾ, ವಜ್ರಗಳು, ಕದನವಿರಾಮ, ಸುಳಿಯಲ್ಲಿ ಸಿಕ್ಕವರು, ತಳಒಡೆದ ದೋಣಿಯಲ್ಲಿ, ಪ್ರವಾಹ-ಸುಳಿ, ಪಂಜರ, ಇಳಿಜಾರು, ಕಾಣಿಕೆ ಮೊದಲಾದ ಕಾದಂಬರಿಗಳನ್ನು ರಚಿಸಿದ್ದಾರೆ. ಐದು ಕಥಾಸಂಕಲನ, ನಾಟಕ, ಪ್ರವಾಸ ಕೃತಿಗಳು, ಪ್ರಬಂಧ ಸಂಕಲನಗಳನ್ನು ಹೊರತಂದಿದ್ದಾರೆ. ಕಮಲಾದಾಸ್ (ಮನೋಮಿ), ಬಿ.ಎಂ. ಸುಹರಾ(ಬಲೆ) ಪಿ.ಕೆ. ಬಾಲಕೃಷ್ಣನ್ (ನಾನಿನ್ನು ನಿದ್ರಿಸುವೆ), ಈಚರ ವಾರಿಯರ್(ತುರ್ತು ಪರಿಸ್ಥಿತಿಯ ಕರಾಳ ಮುಖ) , ಆರ್. ಬಿ. ಶ್ರೀಕುಮಾರ್ (ಧರ್ಮದ ಹೆಸರಿನಲ್ಲಿ), ಡಾ. ಕತೀಜಾ ಮುಮ್ತಾಜ್ (ಮುಂಬೆಳಕು), ಎಂ.ಎನ್. ಕಾರಶೇಂ(ವೈಕಂ ಮಹಮ್ಮದ್ ಬಷೀರ್), ಸಯ್ಯದ್ ಮೆಹಬೂಬ್ ಶಾ ಖಾದ್ರಿ (ಮುಸ್ಲಿಂ ಮಹಿಳೆಯರು ಮತ್ತು ತಲಾಖ್) ಎಂಬ ಕೃತಿಗಳನ್ನು ಮಲಯಾಳ ಭಾಷೆಯಿಂದ ಕನ್ನಡಕ್ಕೆ ಅನುವಾದಿಸಿದ್ದರು.
ಅವರಿಗೆ ರಾಜ್ಯೋತ್ಸವ ಪ್ರಶಸ್ತಿ, ನಾಡೋಜ ಗೌರವ ಸೇರಿದಂತೆ ಹಲವು ಪ್ರಶಸ್ತಿ ಪುರಸ್ಕಾರಗಳು ಬಂದಿವೆ. ಮಂಗಳೂರು ವಿಶ್ವವಿದ್ಯಾಲಯವು ಅವರಿಗೆ 2008ರಲ್ಲಿ ಗೌರವ ಡಾಕ್ಟರೇಟ್‌ ನೀಡಿತ್ತು.
ಸಾರಾ ಅವರು ನಾಲ್ವರು ಪುತ್ರರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು